ಚಿಕ್ಕಬಳ್ಳಾಪುರ: ಅರಣ್ಯ ಇಲಾಖೆಯ ಜೀಪು ಮತ್ತು ಬೈಕ್ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿದ್ದು, ಬೈಕನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಮ್ಮಗಾರಹಳ್ಳಿ ಗೇಟ್ ಬಳಿ ನಡೆದಿದೆ.
ಅನಿಲ್ ಕುಮಾರ್(17) ಮತ್ತು ಭರತ್ ಕುಮಾರ್(17) ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳು. ಅನಿಲ್ ಮತ್ತು ಭರತ್ ಶಿಡ್ಲಘಟ್ಟ ಪಟ್ಟಣದ ಐಟಿಐ ಕಾಲೇಜಿನ ವಿದ್ಯಾರ್ಥಿಗಳು. ಕೆಎಸ್ಆರ್ಟಿಸಿ ಬಸ್ನ್ನು ಓವರ್ ಟೇಕ್ ಮಾಡುವ ಅಪಘಾತ ಸಂಭವಿಸಿದೆ.
ಈ ಸಂಬಂಧ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.