ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಹಿಂದೆ ಪಾಕ್‌ ಕೈವಾಡ – ರಹಸ್ಯ ಬಯಲು!

Public TV
2 Min Read

– ಪೂಂಚ್, ರಜೌರಿಯಲ್ಲೂ ಉಗ್ರರ ದಾಳಿಗೆ ಪಾಕ್‌ ಸಂಚು – ಗುಪ್ತಚರ ಇಲಾಖೆ ಮಾಹಿತಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ (IB) ಬಳಿ ಹಳ್ಳಿಯೊಂದರಲ್ಲಿ ಇತ್ತೀಚೆಗೆ ನಡೆದ ಎನ್‌ಕೌಂಟರ್‌ನಲ್ಲಿ (Kathua Encounter) ಭದ್ರತಾಪಡೆಗಳು ಹತ್ಯೆಗೈದ ಇಬ್ಬರು ಭಯೋತ್ಪಾದಕರಲ್ಲಿ ಓರ್ವ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಕಮಾಂಡರ್‌ ಎಂದು ಮೂಲಗಳಿಂದ ತಿಳಿದುಬಂದಿದೆ.

ಮೂಲಗಳ ಪ್ರಕಾರ, ಹತ್ಯೆಗೀಡಾದ ಇಬ್ಬರಲ್ಲಿ ಓರ್ವ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಕಮಾಂಡರ್ ರಿಹಾನ್ ಎಂದು ಗುರುತಿಸಲಾಗಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಪಾಕ್‌ (Pakistan) ಕೈವಾಡವಿದೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ದೆಹಲಿಯ ಯಮುನಾ ಬಳಿಯ ಪ್ರಾಚೀನ ಶಿವಮಂದಿರ ಕೆಡವಲು ನೀಡಿದ ಆದೇಶ ಎತ್ತಿಹಿಡಿದ ಸುಪ್ರೀಂ

ಹತ್ಯೆಗೀಡಾದ ರಿಹಾನ್‌, ಉಪಗ್ರಹ ಸಂವಹನ ಸಾಧನ‌ (ಸ್ಯಾಟಲೈಟ್‌ ಫೋನ್‌) ಹಾಗೂ ಅತ್ಯಾಧುನಿಕ M4 ರೈಫಲ್‌ ಅನ್ನು ಹೊತ್ತೊಯ್ಯುತ್ತಿದ್ದ. ಪಾಕಿಸ್ತಾನ ಸೇನೆ, ನೌಕಾಪಡೆ ಹಾಗೂ ವಾಯುಸೇನೆಗಾಗಿ ಈ ಮೈಕ್ರೋ ಸ್ಯಾಟಲೈಟ್‌ ಫೋನ್‌ ಅನ್ನು ಖರೀದಿಸಲಾಗಿತ್ತು ಎಂದು ಉನ್ನ ಮೂಲಗಳಿಂದ ತಿಳಿದುಬಂದಿದೆ.

ಈ ಉಗ್ರರ ಹತ್ಯೆ ನಡೆಯುವುದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವೇಳೆ ಭಯೋತ್ಪಾದಕ ದಾಳಿ ನಡೆದಿತ್ತು. ಬಸ್‌ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಬಸ್‌ ಕಮರಿಗೆ ಉರುಳಿ ಬಿದ್ದಿತ್ತು. ಈ ವೇಳೆ 9 ಪ್ರಯಾಣಿಕರು ಹತರಾಗಿದ್ದರು. ಇದಾದ ಬಳಿಕ ದೋಡಾ ಜಿಲ್ಲೆಯಲ್ಲಿ 4 ಭಯೋತ್ಪಾದಕ ದಾಳಿ ನಡೆದಿತ್ತು. ಉಗ್ರರು ಮತ್ತು ಸೇನೆ ನಡುವಿನ ಗುಂಡಿನ ಚಕಮಕಿಯಲ್ಲಿ ಸಿಆರ್‌ಪಿಎಫ್‌ ಯೋಧ ಮತ್ತು ಇಬ್ಬರು ಭಯೋತ್ಪಾದಕರು ಸೇರಿ 11 ಮಂದಿ ಹತರಾಗಿದ್ದರು.

ಉಗ್ರರ ಮಹತ್ವದ ಸಭೆ:
ಜೂನ್‌ 9ರಂದು ರಿಯಾಸಿಯಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಜೈಶ್‌ ಎ ಮೊಹಮ್ಮದ್‌ ಮತ್ತು ಹಿಜ್ಬ್‌-ಉಲ್‌ ಮುಜಾಹಿದ್ದೀನ್‌ ಭಯೋತ್ಪಾದಕ ಸಂಘಟನೆಗಳು ಪಾಕಿಸ್ತಾನದ ರಾವಲಕೋಟ್‌ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದವು. ಈ ವೇಳೆ ಭಾರತದ ಮೇಲಿನ ದಾಳಿಗೆ ಯೋಜಿಸಿದ್ದವು ಎಂದು ತಿಳಿದುಬಂದಿದೆ.

ಇದೀಗ ಕಳೆದ 2 ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿರುವ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಭಯೋತ್ಪಾದಕ ದಾಳಿ ನಡೆಸಲು ಪ್ಲ್ಯಾನ್‌ ಮಾಡಿರುವ ಬಗ್ಗೆ ಗುಪ್ತಚರ ಇಲಾಖೆ ವರದಿ ನೀಡಿದ್ದು, ಭದ್ರತಾ ಪಡೆಗಳು ಹದ್ದಿನಕಣ್ಣಿಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದುರಹಂಕಾರಿಗಳಾಗಿ ಬದಲಾಗಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ: ಬಿಜೆಪಿ ವಿರುದ್ಧ ಆರ್‌ಎಸ್‌ಎಸ್ ಮುಖಂಡ ವಾಗ್ದಾಳಿ

Share This Article