ಜ.22ರಿಂದ 31ರ ತನಕ ವಿಧಾನಮಂಡಲದ ಜಂಟಿ ಅಧಿವೇಶನ

1 Min Read

ಬೆಂಗಳೂರು: ಇದೇ ಜ.22ರಿಂದ ಜ.31ರ ತನಕ ಅಧಿವೇಶನ ನಡೆಸಲು ತುರ್ತು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ರಜಾ ದಿನಗಳನ್ನ ಹೊರತುಪಡಿಸಿ ಎಷ್ಟು ದಿನ ಅಧಿವೇಶನ ನಡೆಯಬೇಕು ಎಂಬುದನ್ನ ಸ್ಪೀಕರ್ ತೀರ್ಮಾನ ಮಾಡಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ (HK Patil) ಸ್ಪಷ್ಟಪಡಿಸಿದ್ದಾರೆ.

ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಚಿವ ಸಂಪುಟ ಸಭೆಯಲ್ಲಿ ಮನ್ರೇಗಾ ವರ್ಸಸ್ ವಿಕಸಿತ ಭಾರತ್ ಜಿರಾಮಜಿ ಕಾಯ್ದೆಗಳನ್ನು ಹೋಲಿಕೆ ಮಾಡಿ, ಸುದೀರ್ಘವಾಗಿ ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆದಿದೆ. ಬಳಿಕ ಐವರು ಸಚಿವರಿಗೆ ಮನ್ರೇಗಾ ಸಮರ್ಥನೆಗೆ ಸೂಚಿಸಿದ್ದು, ಹೆಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಕೃಷ್ಣಬೈರೇಗೌಡ, ಶರಣಪ್ರಕಾಶ್ ಪಾಟೀಲ್, ಲಾಡ್ ಅವರ ತಂಡ ರಚನೆ ಮಾಡಿದ್ದು, ಸದನದಲ್ಲಿ ಕಡ್ಡಾಯ ಹಾಜರಾತಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.ಇದನ್ನೂ ಓದಿ: ಜ.20, 21ರಂದು ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ: ಬಿಜೆಪಿ-ಕಾಂಗ್ರೆಸ್ ನಡುವೆ ರಣರಂಗ?

ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯಕ್ಕೆ ಸರ್ಕಾರ ತಂತ್ರ ರೂಪಿಸಿದ್ದು, ಕ್ಯಾಬಿನೆಟ್‌ನಲ್ಲಿ ಸುದೀರ್ಘ ಚರ್ಚೆ ನಡೆದಿದೆ. ಒಟ್ಟಾರೆ ಇವತ್ತಿನ ಕ್ಯಾಬಿನೆಟ್‌ನಲ್ಲಿ ಮೂರು ನಿರ್ಣಯ ತೆಗೆದುಕೊಂಡಿದ್ದು, ಅಧಿವೇಶನ ದಿನಾಂಕ ಅಧಿಕೃತಗೊಳಿಸಿದೆ.

ತುರ್ತು ಕ್ಯಾಬಿನೆಟ್‌ನ ಮೂರು ನಿರ್ಣಯಗಳು:
1. ವಿಧಾನಸಭೆ ಜಂಟಿ ಅಧಿವೇಶನವನ್ನ ಜ.22ರ 11ಗಂಟೆಗೆ ಕರೆಯಲು ಕ್ಯಾಬಿನೆಟ್ ತೀರ್ಮಾನ, ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ

2. ರಾಜ್ಯಪಾಲರ ಜಂಟಿ ಭಾಷಣ ಅನುಮೋದನೆಗೆ ಸಿಎಂ ಪರಮಾಧಿಕಾರ

3. ವಿಬಿಜಿ ರಾಮ್ ಜಿ ಕಾಯ್ದೆ 2025 ಸಮಾಜದ ಮೇಲೆ ಬೀರುವ ಪರಿಣಾಮಗಳ ಕುರಿತು ಜಂಟಿ ಅಧಿವೇಶನದಲ್ಲಿ ಚರ್ಚಿಸಿ, ನಿರ್ಣಯಿಸಲು ತೀರ್ಮಾನ.ಇದನ್ನೂ ಓದಿ: ನರೇಗಾ ಬಗ್ಗೆ ಚರ್ಚೆಗೆ ಸಿದ್ಧ, ಸರ್ಕಾರ ವಿಶೇಷ ಅಧಿವೇಶನ ನಡೆಸಲಿ – ಸಿ.ಟಿ.ರವಿ

Share This Article