ಕ್ಯಾಬಿನೆಟ್‌ನಲ್ಲಿ ನ್ಯಾ.ನಾಗಮೋಹನ್ ದಾಸ್ ವರದಿ ಮಂಡನೆ – ಆ.16ಕ್ಕೆ ವಿಶೇಷ ಸಂಪುಟ ಸಭೆ

Public TV
1 Min Read

ಬೆಂಗಳೂರು: ಒಳಮೀಸಲಾತಿ (Internal Reservation) ವರ್ಗೀಕರಣ ಸಂಬಂಧ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾ.ನಾಗಮೋಹನ್ ದಾಸ್ (Nagmohan Das) ವರದಿ ಸಂಪುಟದಲ್ಲಿ ಮಂಡನೆಯಾಗಿದೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ದೆಹಲಿ ನಂತರದ ದೊಡ್ಡ ಮೆಟ್ರೋ ಸಂಚಾರ ಜಾಲ: ತೇಜಸ್ವಿ ಸೂರ್ಯ

ಕ್ಯಾಬಿನೆಟ್‌ನಲ್ಲಿ ವರದಿ ಸ್ವೀಕಾರ ಮಾಡಿ ಯಾವುದೇ ಚರ್ಚೆ ನಡೆಸದೇ ಎಲ್ಲ ಸಚಿವರಿಗೂ ವರದಿ ಪ್ರತಿ ನೀಡಲು ಸೂಚಿಸಲಾಗಿದೆ. ಅಲ್ಲದೆ ಆ.16ರಂದು ವಿಶೇಷ ಸಂಪುಟ ಸಭೆ ಕರೆದಿದ್ದು, ಆ ಸಭೆಯಲ್ಲಿ ಮೀಸಲಾತಿ ಸಂಬಂಧ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಸಂಪುಟ ಸಭೆಯಲ್ಲಿ ಮಂಡನೆಯಾದ ನ್ಯಾ.ನಾಗಮೋಹನ್ ದಾಸ್ ಶಿಫಾರಸ್ಸಿನ ಪ್ರಕಾರ 5 ವರ್ಗಗಳನ್ನ ಗುರುತಿಸಿದ್ದು, ಪ್ರವರ್ಗ ಎ ವರ್ಗಕ್ಕೆ 1% ಮೀಸಲಾತಿ, ಪ್ರವರ್ಗ ಬಿ (ಎಡ)ಗೆ 6% ಮೀಸಲಾತಿ, ಪ್ರವರ್ಗ ಸಿ(ಬಲ)ಗೆ 5%, ಪ್ರವರ್ಗ ಡಿಗೆ 4%, ಪ್ರವರ್ಗ ಇಗೆ 1% ಮೀಸಲಾತಿಗೆ ಶಿಫಾರಸು ಮಾಡಲಾಗಿದೆ. ಆದರೆ ಈ ವಿಚಾರದಲ್ಲಿ ಸಂಪುಟದ ಎಸ್‌ಸಿ ಸಮುದಾಯದ ಸಚಿವರಲ್ಲೇ ಭಿನ್ನಾಭಿಪ್ರಾಯ ಇದೆ ಎನ್ನಲಾಗಿದ್ದು, ಸಿದ್ದರಾಮಯ್ಯ ಅಡಕತ್ತರಿಯಲ್ಲಿ ಸಿಲುಕಿದ್ದಾರೆ.ಇದನ್ನೂ ಓದಿ: ತಂಗಿಯ ಸೀಮಂತಕ್ಕೆ ಬಂದಿದ್ದ ಅಕ್ಕನಿಗೆ ಬಸ್ಸಿನಿಂದ ಇಳಿಯುವಾಗ ಕಾರು ಡಿಕ್ಕಿ – ರಕ್ತಸ್ರಾವದಿಂದ ಸಾವು

Share This Article