ಜೆಪಿ ನಡ್ಡಾ ಸಮ್ಮುಖದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ

Public TV
1 Min Read

ನವದೆಹಲಿ: ಮಧ್ಯಪ್ರದೇಶದಲ್ಲಿ ಕಮಲನಾಥ್ ಸರ್ಕಾರದ ವಿರುದ್ಧ ಬಂಡಾಯ ಸಾರಿ ಕಾಂಗ್ರೆಸ್ಸಿಗೆ ಗುಡ್‍ಬೈ ಹೇಳಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ದೆಹಲಿಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಧಿಯಾ ಅವರನ್ನು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪಕ್ಷದ ಶಾಲನ್ನು ನೀಡಿ ಬಿಜೆಪಿಗೆ ಬರಮಾಡಿಕೊಂಡರು.

ಮಂಗಳವಾರ ಸಿಂಧಿಯಾ ಕಾಂಗ್ರೆಸ್ ಪಕ್ಷಕ್ಕೆ ಗುಡ್‍ಬೈ ಹೇಳಿದ್ದರು. ರಾಜೀನಾಮೆ ಬೆನ್ನಲ್ಲೇ ಸಿಂಧಿಯಾ ಆಪ್ತರಾಗಿದ್ದ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು.

22 ಶಾಸಕರ ರಾಜೀನಾಮೆಯಿಂದ ಕಮಲನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಈಗ ಸದನದಲ್ಲಿ 206 ಶಾಸಕರಿದ್ದು ಬಹುಮತ ಸಾಧಿಸಲು 104 ಶಾಸಕರ ಬೆಂಬಲ ಬೇಕಿದೆ. ಬಿಜೆಪಿ ಬಳಿ 107 ಶಾಸಕರಿದ್ದರೆ ಕಾಂಗ್ರೆಸ್ ಬಳಿ 92 ಶಾಸಕರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *