– ಅಕ್ರಮಗಳು ನಮ್ಮ ಕಣ್ಮುಂದೆಯೇ ನಡೆದಿವೆ, ನಮ್ಗೆ ಅವಮಾನ ಆಗಬೇಕು ಅಂತ ಬೇಸರ
– ಮತಗಳ್ಳತನದಿಂದಲೇ ಮೋದಿ ಪಿಎಂ ಆಗಿರೋದು ನೂರಕ್ಕೆ ನೂರು ಸತ್ಯ ಎಂದ ಸಚಿವ
ತುಮಕೂರು: ಮತಗಳ್ಳತನ (Vote Theft) ಎಂದು ನಾವು ಹೇಳುತಿದ್ದೇವೆ. ಇದು ನಡೆದಿರೋದು ನಿಜ. ಆದರೆ ನಾವು ಮೊದಲು ನೋಡಿಕೊಳ್ಳದೇ ಈಗ ಹೇಳುತ್ತಿರೋದು ನಮಗೆ ನಾಚಿಕೆ ಆಗಬೇಕು. ನಮ್ಮದೇ ಸರ್ಕಾರ ಇದ್ದಾಗ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ ಅಂತ ಸಚಿವ ಕೆ.ಎನ್ ರಾಜಣ್ಣ (KN Rajanna) ತಮ್ಮದೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ (Tumkur) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ (Lok Sabha Election) ಅಕ್ರಮ ನಡೆದಿದ್ಯಾ? ಅನ್ನೋ ಪ್ರಶ್ನೆಗೆ ಉತ್ತರಿಸಿದರು. ಇದನ್ನೆಲ್ಲಾ ಮಾತನಾಡೋಕೆ ಹೋದ್ರೆ ಏನೇನೋ ಆಗುತ್ತೆ. ವೋಟರ್ ಲಿಸ್ಟ್ ಎಲ್ಲಾ ಯಾವ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿರೋದು ಅಲ್ವಾ? ಆವಾಗ ಎಲ್ಲಾ ಕಣ್ಮುಚ್ಚಿ ಕುಳಿತಿದ್ರಾ? ಎಂದು ತಮ್ಮ ಸರ್ಕಾರವನ್ನೇ ಪ್ರಶ್ನಿಸಿದ್ದಾರೆ. ಅಲ್ಲದೇ ಈ ಅಕ್ರಮಗಳು ನಡೆದಿರೋ ಸತ್ಯ. ಇದರಲ್ಲಿ ಯಾವುದೇ ಸುಳ್ಳು ಏನಿಲ್ಲ. ಅಕ್ರಮಗಳು ನಮ್ಮ ಕಣ್ಮುಂದೆನೆ ನಡೆದಿದ್ದವಲ್ಲಾ ನಮಗೆ ಅವಮಾನ ಆಗಬೇಕು. ನಾವು ನೋಡಿಕೊಳ್ಳಲಿಲ್ಲವಲ್ಲ ಅಂತ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ
ಮತಗಳ್ಳತನದಿಂದ ಮೋದಿ ಪ್ರಧಾನಿ ಆಗಿರೋದು
ಈ ಘಟನೆಯಿಂದ ಪಾಠ ಕಲಿತು ನಾವು ಮುಂದೆ ಎಚ್ಚರಿಕೆಯಿಂದ ಇರಬೇಕು. ಅವರು ಮಾಡಬಾರದ್ದನ್ನ ಮಾಡಿ ವೋಟರ್ ಲಿಸ್ಟ್ (Voter List) ಬದಲಾವಣೆ ಮಾಡಿ ಪ್ರಧಾನ ಮಂತ್ರಿ ಆಗಿದ್ದಾರೆ. ಅದು ನೂರಕ್ಕೆ ನೂರು ಸತ್ಯ. ಆದರೆ ನಮಗೆ ಡ್ರಾಪ್ ಎಲೆಕ್ಷನ್ ಕಮಿಷನ್ ನಿಂದ ರೋಲ್ ಮಾಡುವಾಗ ನೋಡಿಕೊಳ್ಳಬೇಕಾ? ಮಹದೇವಪುರದಲ್ಲಂತು ಮೋಸ ಮಾಡಿರೋದು ನಿಜ. ಒಬ್ಬನೇ ಮೂರು ಮೂರು ಕಡೆಗಳಲ್ಲಿ ವೋಟರ್ ಲಿಸ್ಟ್ ಸೇರಿಕೊಂಡು ವೋಟ್ ಹಾಕಿದ್ರೆ. 10, 15 ಜನ ಇರೋ ಕಡೆಗಳಲ್ಲಿ 60 ಜನ ವೋಟರ್ ಲಿಸ್ಟ್ಗೆ ಸೇರಿಸ್ತಾರೆ. ಅಡ್ರೆಸ್ ಗಳಿಲ್ಲ.. ತಂದೆ ಹೆಸರಿಲ್ಲ. ಈತರದ್ದನ್ನೆಲ್ಲಾ ಅಕ್ರಮವಾಗಿ ಮಾಡಿದ್ದಾರೆ. ಆದರೆ ನಾವು ಡ್ರಾಪ್ಟ್ ಎಲೆಕ್ಟ್ರಾನೊ ರೋಲ್ ಮಾಡಿದಾಗ ನಾವು ಅಬ್ಜಕ್ಷನ್ ಹಾಕಬೇಕಿತ್ತು ಎಂದರು. ಇದನ್ನೂ ಓದಿ: ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದಿದ್ದು ಮತ ಖರೀದಿಯಿಂದ: ಸಿ.ಎಂ.ಇಬ್ರಾಹಿಂ ಆರೋಪ
ಉಸ್ತುವಾರಿ ಬದಲಾವಣೆ ಸಿಎಂ ತೀರ್ಮಾನ
ಮುಂದುವರಿದು… ಉಸ್ತುವಾರಿ ಬದಲಾವಣೆ ಕುರಿತಂತೆ ಮಾತನಾಡಿ, ಸಿಎಂ ಅವರಿಗೆ ಬಿಟ್ಟ ವಿಚಾರ. ಬದಲಾವಣೆ ಮಾಡುವಂತಹದ್ದು, ಯಾರನ್ನ ಎಲ್ಲಿಗೆ ಹಾಕಬೇಕು ಅನ್ನೋ ತಿರ್ಮಾನ ಮಾಡಿದ್ದಾರೆ. ಆ ತಿರ್ಮಾನದಿಂದ ನನಗೆ ತುಂಬಾ ಸಂತೋಷ ಆಗಿದೆ. ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ ಆದ ಮೇಲೆ ಹಾಸನ ಜಿಲ್ಲಾ ಉಸ್ತುವಾರಿ ಸ್ಥಾನ ಬಿಟ್ರಾ ಎಂ ಪ್ರಶ್ನೆಗೆ ಉತ್ತರಿಸಿ, ರಾಜಕೀಯ ಯಾರಿಗೂ ಶಾಶ್ವತವಲ್ಲ. ಬೇಕು ಬೇಡ ಪ್ರಶ್ನೆ ಅಲ್ಲ ಸಂದರ್ಭೋಜಿತವಾಗಿ ಒಳ್ಳೆಯ ಸಮಯದಲ್ಲಿ ಮುಖ್ಯಮಂತ್ರಿಗಳು ತಗೊಂಡಿದ್ದಾರೆ. ಎರಡು ತಿಂಗಳ ಮುಂಚೆನೆ ನಾನೇ ಮನವಿ ಮಾಡಿದ್ದೆ. ಆ ಮನವಿಯನ್ನ ಪುರಸ್ಕಾರ ಮಾಡಿದ್ದಾರೆ ಎಂದು ತಿಳಿಸಿದರು.
ಸ್ವಾಮೀಜಿ ಹೇಳಿದಂತೆ ಎಲ್ಲಾ ನಡಿಯುತ್ತಾ?
ಇನ್ನೂ ಪರಮೇಶ್ವರ್ ಸಿಎಂ ಆಗಬೇಕು ಎಂದು ಸ್ವಾಮೀಜಿಗಳ ಒತ್ತಾಯ ವಿಚಾರಕ್ಕೂ ಮಾತನಾಡಿದ ರಾಜಣ್ಣ, ಸ್ವಾಮೀಜಿಗಳು ಹೇಳಿದ್ದಂಗೆ ಎಲ್ಲಾ ನಡೆಯುವ ಹಾಗೇ ಇದಿದ್ದರೇ ರಾಜಕಾರಣಿಗಳು ಯಾಕೆ ಇರಬೇಕಿತ್ತು? ಎಲ್ಲಾ ಸ್ವಾಮೀಜಿಗಳೇ ತಿರ್ಮಾನ ಮಾಡಬಹುದಿತ್ತಲ್ವಾ? ಆಗಲಿ ಅಂತಾನೆ ನಾನು ಹೇಳೊದು ಪರಮೇಶ್ವರ್ ಸಿಎಂ ಆಗಬೇಕು ಅವಕಾಶ ಬಂದಾಗ ಅಂತಾ ಹೇಳೋನು ನಾನು. ಸ್ವಾಮಿಗಳು ಹೇಳಿದಂಗೆ ನಡೀಯುತ್ತಾ ರಾಜಕಾರಣ? ನಡಿಲಿ ನೋಡೋಣ ಎಂದರು. ಇದನ್ನೂ ಓದಿ: ಸಿಂಧೂರ ಕಾರ್ಯಾಚರಣೆಯಲ್ಲಿ ಬ್ರಹ್ಮೋಸ್ ಕ್ಷಿಪಣಿಯನ್ನ ಆಕ್ರಮಣಕಾರಿ ಅಸ್ತ್ರವಾಗಿ ಬಳಸಲಾಗಿತ್ತು: ಸಮೀರ್ ಕಾಮತ್