ದತ್ತಪೀಠ ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕು ಕಾರಣ: ಈಶ್ವರಪ್ಪ

Public TV
1 Min Read

ಶಿವಮೊಗ್ಗ: ದತ್ತಪೀಠ ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕೆ ಕಾರಣವಾಗಿದ್ದು, ಕೆಲ ಕಿಡಿಗೇಡಿಗಳಿಗೆ ಕಾಂಗ್ರೆಸ್‍ನವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿ ಕಾರಿದ್ದಾರೆ.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ಆದೇಶಕ್ಕೆ ನಾವು ಬೆಲೆ ಕೊಡುತ್ತೇವೆ. ದತ್ತಪೀಠದಲ್ಲಿ ಗೋರಿ ನಿರ್ಮಾಣ ಮಾಡಿ, ಅದಕ್ಕೆ ಬಾಬಾ ಬುಡನ್‍ಗಿರಿ ಎಂದು ಹೆಸರು ಹೇಳಿದರೆ ಆಗುತ್ತೇ? ದತ್ತಪೀಠ ಎಂಬ ಹೆಸರಿದ್ದು, ನ್ಯಾಯಾಲಯದ ಆದೇಶದಂತೆ ಅದು ದತ್ತಪೀಠವೇ ಆಗಿದೆ. ಹೀಗಿರುವಾಗ ಕೆಲವು ಕಿಡಿಗೇಡಿಗಳು ಅಲ್ಲಿ ನಮಾಜ್ ಮಾಡಿ, ಮಾಂಸಾಹಾರ ಸೇವಿಸಿದ್ದಾರೆ ಅಂದರೆ ಅವರಿಗೆ ಇನ್ನೆಷ್ಟು ಸೊಕ್ಕು ಇರಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: ದತ್ತಪೀಠ ವಿವಾದಿತ ಸ್ಥಳದಲ್ಲಿ ನಮಾಜ್?

ಏನಿದು ಘಟನೆ?
ಈ ಹಿಂದೆ ಚಿಕ್ಕಮಗಳೂರಿನಲ್ಲಿ ಕಿಡಿಗೇಡಿಗಳು ದತ್ತಪೀಠದ ವಿವಾದಿತ ಸ್ಥಳದಲ್ಲಿ ಮಾಂಸದೂಟ ಮಾಡಿ, ಗೋರಿ ಪೂಜೆ ಬಳಿಕ ದತ್ತಪೀಠದ ಆವರಣದಲ್ಲಿ ನಮಾಜ್ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವಿವಾದ ಸೃಷ್ಟಿಯಾಗಿತ್ತು. ಇದನ್ನೂ ಓದಿ: ರಾಷ್ಟ್ರಧ್ವಜದ ಮೇಲೆ ನಿಂತು ನಮಾಜ್- ವ್ಯಕ್ತಿಯ ಬಂಧನ

Share This Article
Leave a Comment

Leave a Reply

Your email address will not be published. Required fields are marked *