ವಿಕ್ರಮ್ ಲ್ಯಾಂಡರ್ ಸ್ಥಳದ ಮಾಹಿತಿ ಲಭ್ಯ: ಇಸ್ರೋ

Public TV
3 Min Read

ಬೆಂಗಳೂರು: ವಿಕ್ರಮ್ ಲ್ಯಾಂಡರ್ ಸ್ಥಳದ ಮಾಹಿತಿ ಲಭ್ಯವಾಗಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದ್ದಾರೆ. ಚಂದ್ರನ ಮೇಲ್ಮೈ ಸ್ಪರ್ಶಿಸಬೇಕಿದ್ದ ವಿಕ್ರಮ್ ಲ್ಯಾಂಡರ್ ಅಂತಿಮ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿತ್ತು.

ಆರ್ಬಿಟರ್ ವಿಕ್ರಮ್ ಲ್ಯಾಂಡರ್ ನ ಥರ್ಮಲ್ ಫೋಟೋವನ್ನು ಕ್ಲಿಕ್ಕಿಸಿದೆ. ಆದರೆ ಇದೂವರೆಗೂ ವಿಕ್ರಮ್ ಲ್ಯಾಂಡರ್ ಸಂಪರ್ಕ ಸಾಧ್ಯವಾಗಿಲ್ಲ. ಸಂಪರ್ಕಿಸುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ತಂಡ ವಿಕ್ರಮ್ ಲ್ಯಾಂಡರ್ ಸಂಪರ್ಕಿಸಲು ನಿರಂತರವಾಗಿ ಶ್ರಮಿಸುತ್ತಿದ್ದು, ಶೀಘ್ರದಲ್ಲಿಯೇ ಸಂಪರ್ಕ ಸಾಧ್ಯವಾಗಲಿದೆ ಎಂದು ಶಿವನ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ:  ಭಾರತದ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಆಗುತ್ತಿದೆ: ಭೂತಾನ್ ಪ್ರಧಾನಿ

ಮುಂದಿನ ಮೂರು ದಿನಗಳಲ್ಲಿ ವಿಕ್ರಮ್ ಲ್ಯಾಂಡರ್ ಎಲ್ಲಿದೆ ಮತ್ತು ಹೇಗಿದೆ ಎಂಬಿತ್ಯಾದಿಗಳ ವಿಷಯಗಳ ಮಾಹಿತಿ ಸಿಗಲಿದೆ ಎಂದು ಹಲವು ವಿಜ್ಞಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದರು. ಹಿರಿಯ ವಿಜ್ಞಾನಿಯೊಬ್ಬರು, ಮುಂದಿನ ಮೂರು ದಿನಗಳಲ್ಲಿ ವಿಕ್ರಮ್ ಲ್ಯಾಂಡರ್ ಸಂಪರ್ಕ ಸಿಗುವ ಸಾಧ್ಯತೆಗಳಿವೆ. ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡು ಸ್ಥಳ ತಲುಪಲು ಆರ್ಬಿಟರ್ ಗೆ ಮೂರು ದಿನ ಸಮಯ ಬೇಕಾಗುತ್ತದೆ. ಕೊನೆಯ ಕ್ಷಣದಲ್ಲಿ ವಿಕ್ರಮ್ ತನ್ನ ಪಥ ಬದಲಿಸಿದ್ದರಿಂದ ಸಂಪರ್ಕ ಕಡಿತಗೊಂಡಿತು ಎಂದು ವಿವರಿಸಿದ್ದರು.

ವಿಕ್ರಮ್ ಸಂಪರ್ಕ ಕಡಿತಕ್ಕೆ ಎಕ್ಸ್ಟ್ರಾ ಬ್ರೇಕ್ ಕಾರಣ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಆರ್ಬಿಟರ್‍ನಿಂದ ಸಾಫ್ಟ್ ಲ್ಯಾಂಡಿಂಗ್ ಮಾಡುವಾಗ ಎಕ್ಸ್ಟ್ರಾ ಹಾರ್ಡ್ ಥ್ರಸ್ಟರ್ ನಿಂದ ಒತ್ತಡ ಹೆಚ್ಚಾಗಿದೆ. ಹಾಗಾಗಿ, ಸಂಪರ್ಕ ಕಡಿತವಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ತಡರಾತ್ರಿಯಿಂದ ಬೆಳಗ್ಗೆ 10 ಗಂಟೆಯವರೆಗೆ ಸಂಪರ್ಕ ಸಾಧಿಸಲು ವಿಜ್ಞಾನಿಗಳ ಶತಪ್ರಯತ್ನ 

ಆರಂಭದಲ್ಲಿ ಥ್ರಸ್ಟರ್ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವಿಜ್ಞಾನಿಗಳು ಭಾವಿಸಿದ್ದರು. ಆದರೀಗ, ಡೇಟಾ ಪರಿಶೀಲನೆಯಲ್ಲಿ ಥ್ರಸ್ಟರ್ ಒತ್ತಡ ತಂದಿದೆ ಎನ್ನಲಾಗ್ತಿದೆ. ಚಂದ್ರಯಾನ 2 ಲ್ಯಾಂಡರ್ ಜೊತೆ ಮತ್ತೆ ಸಂಪರ್ಕ ಸಾಧಿಸಲು ಮುಂದಿನ 14 ದಿನಗಳ ಕಾಲ ನಿರಂತರ ಪ್ರಯತ್ನ ನಡೆಸಲಾಗುತ್ತಿದೆ. ಚಂದ್ರನನ್ನು ಸುತ್ತುತ್ತಿರುವ ಆರ್ಬಿಟರ್ 7 ವರ್ಷಗಳ ಕಾಲ ತನ್ನ ಕೆಲಸ ಮಾಡಲಿದೆ. ಯೋಜನೆ ಶೇ.90 ರಿಂದ 95ರಷ್ಟು ಯಶಸ್ವಿಯಾಗಿದೆ ಅಂತ ಇಸ್ರೋ ಹೇಳಿದೆ.

ಈ ಮಧ್ಯೆ, ಇಸ್ರೋಗೆ ಅಮೆರಿಕದ ನಾಸಾ ಧೈರ್ಯ ತುಂಬಿದೆ. ಬಾಹ್ಯಾಕಾಶ ಭಾರೀ ಕಷ್ಟಕರ. ಆದರೂ, ಭಾರತದ ಸಾಧನೆ ಏನೂ ಕಡಿಮೆಯಲ್ಲ. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ಯತ್ನವನ್ನು ನಾವು ಶ್ಲಾಘಿಸುತ್ತೇವೆ. ನಿಮ್ಮ ಕಾರ್ಯದಿಂದ ನಾವು ಸ್ಫೂರ್ತಿ ಪಡೆದಿದ್ದೇವೆ. ಮುಂಬರುವ ದಿನಗಳಲ್ಲಿ ಒಟ್ಟಾಗಿ ಶ್ರಮಿಸುವ ಅವಕಾಶಕ್ಕಾಗಿ ಎದುರು ನೋಡುತ್ತಿದ್ದೇವೆ ಎಂದು ನಾಸಾ ಟ್ವೀಟ್ ಮಾಡಿದೆ. ಇದನ್ನೂ ಓದಿ:  ರೈತನ ಮಗ ಇಸ್ರೋ ರಾಕೆಟ್ ಮ್ಯಾನ್ ಆದ ಕಥೆ ಓದಿ

ಚಂದ್ರಯಾನ-2 ಪಯಣ:
ಶನಿವಾರ ಬೆಳಗಿನ ಜಾವ 1.39ಕ್ಕೆ ಲ್ಯಾಂಡರ್ ಚಂದ್ರನತ್ತ ಇಳಿಯುವ ಕೊನೆಯ ಸಿದ್ಧತೆ ಆರಂಭಗೊಂಡಿತ್ತು. ಇಸ್ರೋ ನಿಗದಿಪಡಿಸಿದ ಪಥದಲ್ಲೇ ಲ್ಯಾಂಡರ್ ಚಲಿಸುತಿತ್ತು. 1.48 ಕೇವಲ 6.ಕಿ.ಮೀ ದೂರದಲ್ಲಿತ್ತು. ಕೊನೆಯ ಹಂತದಲ್ಲಿ ಲ್ಯಾಂಡರ್ ವೇಗೋತ್ಕರ್ಷವನ್ನು ಕಳೆದುಕೊಂಡಿತು. ದೊಡ್ಡ ಪರದೆಯಲ್ಲಿ ಕೆಂಪು ಬಣ್ಣದ ರೇಖೆ ಸಾಗಬೇಕಾದ ದಾರಿ ತೋರಿಸುತ್ತಿದ್ದರೆ ಹಸಿರು ಬಣ್ಣ ಟ್ರಾಜೆಕ್ಟರಿ ರೇಖೆ ಕೆಂಪು ಬಣ್ಣದ ಮೇಲೆಯೇ ಹೋಗುತಿತ್ತು. 1.55ಕ್ಕೆ ಹಸಿರು ಬಣ್ಣದ ಟ್ರಾಜೆಕ್ಟರಿ ರೇಖೆ ಕೆಂಪು ಬಣ್ಣವನ್ನು ಬಿಟ್ಟು ಬೇರೆ ಕಡೆ ಹೋಗುವುದನ್ನು ನೋಡುತ್ತಿದ್ದ ವಿಜ್ಞಾನಿಗಳು ಆಂತಕಕ್ಕೆ ಒಳಗಾದರು. ಅಲ್ಲಿಯವರೆಗೆ ಸಂಭ್ರಮದಲ್ಲೇ ಇದ್ದ ವಿಜ್ಞಾನಿಗಳು ಲ್ಯಾಂಡರಿನಿಂದ ಬರುತ್ತಿರುವ ಸಿಗ್ನಲ್ ನೋಡಿ ಮುಖದಲ್ಲಿದ್ದ ಸಂಭ್ರಮ ಮರೆಯಾಗಿ ಆತಂಕ ಹೆಚ್ಚಾಯಿತು. ಏನು ನಡೆಯುತ್ತಿದೆ ಎನ್ನುವುದು ಯಾರಿಗೂ ತಿಳಿಯಲಿಲ್ಲ. ಕೊನೆಗೆ 2.17 ಕ್ಕೆ ಇಸ್ರೋ ಅಧ್ಯಕ್ಷ ಶಿವನ್ 2.1 ಕಿ.ಮೀ ದೂರದಲ್ಲಿದ್ದಾಗ ವಿಕ್ರಮ್ ಸಂಪರ್ಕ ಕಡಿತಗೊಂಡಿದೆ ಎಂದು ಬಹಳ ಗದ್ಗದಿತವಾಗಿ ಪ್ರಕಟಿಸಿ, ಸಂಪರ್ಕ ಸಾಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಅಂತಿಮ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಮ್ ಲ್ಯಾಂಡರ್ ನ ಕ್ಷಣಕ್ಷಣದ ಕೌತುಕ

ವಿಡಿಯೋ ವೈರಲ್: ಮಂಗಳಯಾನ ಗುರಿ ಮುಟ್ಟದ್ದಕ್ಕೆ  ಬೇಸರದಲ್ಲಿದ್ದ ಶಿವನ್ ಅವರನ್ನು ಪ್ರಧಾನಿ ಮೋದಿ ಸಮಾಧಾನ ಪಡಿಸುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಇಸ್ರೋ ಕಚೇರಿಯಿಂದ ಹೊರ ಬರುತ್ತಲೇ ಪ್ರಧಾನಿ ಮೋದಿ ಅವರನ್ನು ನೋಡಿ ಇಸ್ರೋ ಮುಖ್ಯಸ್ಥ ಕೆ.ಶಿವನ್ ಕಣ್ಣೀರಿಟ್ಟರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಶಿವನ್ ಅವರನ್ನು ಅಪ್ಪಿ ಬೆನ್ನು ತಟ್ಟಿ ಸಮಾಧಾನಪಡಿಸಿದರು. ಇದನ್ನೂ ಓದಿ: ಮೋದಿ ಆಲಂಗಿಸಿ ಕಣ್ಣೀರಿಟ್ಟ ಶಿವನ್

Share This Article
Leave a Comment

Leave a Reply

Your email address will not be published. Required fields are marked *