ಕಬಿನಿ ಕಿರುನಾಲೆ ಏರಿ ಬಿರುಕು – ರೈತರ ಜಮೀನು ಬದಲು ರಸ್ತೆಗೆ ನುಗ್ಗಿದ ನೀರು

Public TV
1 Min Read

ಮೈಸೂರು: ಜಿಲ್ಲೆಯ ಕಬಿನಿ ಬಲದಂಡೆ ನಾಲೆಗೆ ಹರದನಹಳ್ಳಿ ಗ್ರಾಮದ ಬಳಿ ಇರುವ ಕಿರುನಾಲೆ ಏರಿ ಒಡೆದಿದೆ. ಇದರಿಂದ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಕಿರು ನಾಲೆ ಒಡೆದ ಪರಿಣಾಮ ರಸ್ತೆಗಳಲ್ಲಿ ನೀರು ಹರಿದು ಹೋಗುತ್ತಿದ್ದು, ಗದ್ದೆಗಳಿಗೆ ನೀರಿಲ್ಲದೆ ರೈತರು ಬವಣೆ ಪಡುತ್ತಿದ್ದಾರೆ. ರಸ್ತೆಗಳಲ್ಲಿ ನೀರು ಹರಿಯುತ್ತಿರುವ ಕಾರಣ ತಮ್ಮ ಗದ್ದೆಗಳಿಗೆ ನೀರು ತಲುಪಲು ಸಾಧ್ಯವಾಗದೆ ರೈತರು ಪರದಾಡುತ್ತಿದ್ದಾರೆ.

ಉತ್ತಮ ಮಳೆ ಹಿನ್ನೆಲೆಯಲ್ಲಿ ನಾಲೆಗಳಿಗೆ ನೀರು ಬಿಟ್ಟಿರುವ ಕಾರಣ ಕೃಷಿ ಚಟುವಟಿಕೆಗೆ ರೈತರು ಮುಂದಾಗಿದ್ದಾರೆ. ನೀರು ಪೋಲಾಗುತ್ತಿರುವ ಕಾರಣ ಅನಾನುಕೂಲತೆ ಉಂಟಾಗಿ, ಕೃಷಿ ಚಟುವಟಿಕೆಗಳನ್ನು ಸ್ಥಗಿತಗೊಳಿಸುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ನೀರಾವರಿ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಬೇಕಿದೆ ಎಂದು ರೈತರು ಆಗ್ರಹಿಸುತ್ತಿದ್ದಾರೆ.

ಕೆಲವು ತಿಂಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ರಾಜ್ಯದ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ. ಇತ್ತ ಮಹಾರಾಷ್ಟ್ರದಲ್ಲಿ ಹೆಚ್ಚಿದ ಮಳೆ ಪ್ರಮಾಣಕ್ಕೆ ಭೀಮಾನದಿ ಉಕ್ಕಿ ಹರಿಯುತ್ತಿದೆ. ಉಜನಿ ಜಲಾಶಯದಿಂದ 35 ಸಾವಿರ ಕ್ಯೂಸೆಕ್ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಸಿಂಧಗಿ ತಾಲೂಕಿನ ಭೀಮಾತೀರದ ತಾರಾಪೂರ ಗ್ರಾಮ ಜಲಾವೃತ್ತಗೊಂಡಿದೆ. ಗ್ರಾಮದ ಮನೆಗಳನ್ನ ನೀರು ಸುತ್ತುವರಿಯುತ್ತಿದ್ದು, ಆತಂಕದಲ್ಲಿ ತಾರಾಪುರ ಗ್ರಾಮಸ್ಥರು ಕಾಲ ಕಳೆಯುವಂತಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *