ಆನೆ ದಾಳಿಗೆ ಬಲಿಯಾದ ಯುವತಿ ಸೇರಿ ಇಬ್ಬರಿಗೆ ತಲಾ 15 ಲಕ್ಷ ಪರಿಹಾರ

Public TV
1 Min Read

ಮಂಗಳೂರು: ಕಾಡಾನೆ ದಾಳಿಯಿಂದ (Elephant Attack) ಮೃತಪಟ್ಟ ಕಡಬದ ಯುವತಿ (Young Woman) ಹಾಗೂ ಸ್ಥಳೀಯ ನಿವಾಸಿಯೊಬ್ಬರ ಕುಟುಂಬಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಜಿಲ್ಲಾಧಿಕಾರಿ ತಲಾ 15 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿ, ಯುವತಿ ಸಹಿತ ಇಬ್ಬರನ್ನ ಕೊಂದು ಹಾಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಕಡಬ (Kadaba) ತಾಲೂಕಿನ ರೆಂಜಿಲಾಡಿಯಲ್ಲಿ ನಡೆದಿದೆ. ಇದನ್ನೂ ಓದಿ: ಕಡಬದಲ್ಲಿ ಕಾಡಾನೆ ದಾಳಿ – ಯುವತಿ ಸಹಿತ ಇಬ್ಬರ ಸಾವು

ಪೇರಡ್ಕ ಹಾಲು ಸೊಸೈಟಿಗೆ ಕೆಲಸಕ್ಕೆಂದು ನಡೆದುಕೊಂಡು ತೆರಳುತ್ತಿದ್ದ ಯುವತಿ ರಂಜಿತಾ (21) ಹಾಗೂ ಆಕೆಯ ರಕ್ಷಣೆಗೆ ಧಾವಿಸಿದ್ದ ರಮೇಶ್ ರೈ ಇಬ್ಬರ ಮೇಲೂ ಕಾಡಾನೆ ದಾಳಿ ನಡೆಸಿತ್ತು. ರಮೇಶ್ ರೈ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಗಂಭೀರ ಸ್ಥಿತಿಯಲ್ಲಿದ್ದ ಯುವತಿ ನೆಲ್ಯಾಡಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಳು. ಇದರಿಂದ ಸ್ಥಳೀಯರು ಇಬ್ಬರ ಶವಗಳನ್ನು ರಸ್ತೆಯಲ್ಲಿಟ್ಟು ಅರಣ್ಯಾಧಿಕಾರಿಗಳ (Forest Officer)) ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಸ್ಥಳೀಯರು, ಅರಣ್ಯಾಧಿಕಾರಿಗಳು ಮತ್ತು ಕಡಬ ಪೊಲೀಸರನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಸ್ಥಳಕ್ಕೆ ತೆರಳಿ, ಪ್ರತಿಭಟನಾಕಾರರನ್ನ ಸಮಾಧಾನಪಡಿಸಿದರು. ಮೃತರ ಕುಟುಂಬಗಳಿಗೆ ತಲಾ 15 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಯುವತಿಯ ಸಹೋದರಿಗೆ ಕೆಲಸ ಕೊಡಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.

ನಂತರ ದುಬಾರೆಯಿಂದ ಪಳಗಿದ ಆನೆಗಳನ್ನು ಕರೆಸಿ, ಇಬ್ಬರ ಸಾವಿಗೆ ಕಾರಣವಾದ ಆನೆಗಳನ್ನು ಸೆರೆಹಿಡಿಯಲಾಗುವುದು ಎಂದು ಅಭಯ ನೀಡಿದರು. ಇದನ್ನೂ ಓದಿ: ರೋಹಿಣಿ ಬಗ್ಗೆ ಮಾತನಾಡೋದಕ್ಕೆ ರೂಪಾ ಯಾರು?: ಸುಧೀರ್ ರೆಡ್ಡಿ ಆಕ್ರೋಶ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *