ಕಲಬುರಗಿ ಜಿಲ್ಲಾದ್ಯಂತ ಪೆಟ್ರೋಲ್ ಬಂಕ್ ಮುಚ್ಚಲು ಜಿಲ್ಲಾಧಿಕಾರಿ ಸೂಚನೆ

Public TV
1 Min Read

ಕಲಬುರಗಿ: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಮುಂದಿನ ಆದೇಶದವರೆಗೆ ಕೆಲವು ಷರತ್ತುಗಳಿಗೆ ಒಳಪಟ್ಟು ಪೆಟ್ರೋಲ್ ಬಂಕ್‍ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಶರತ್ ಬಿ. ಅವರು ಆದೇಶ ಹೊರಡಿಸಿದ್ದಾರೆ.

ಈ ಆದೇಶವು ಸರ್ಕಾರಿ ವಾಹನಗಳು, ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ವಾಹನ, ಎಲ್ಲಾ ತರಹದ ಅಂಬುಲೆನ್ಸ್ ಗಳು, ಔಷಧ ವ್ಯಾಪಾರಿಗಳು, ಪತ್ರಕರ್ತರು, ಕೆಲವು ಅವಶ್ಯಕ ಸೇವಾ ವ್ಯಾಪ್ತಿ ಪಡುವ ಇಲಾಖೆಗಳು ಹಾಗೂ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಇಂಧನ ಭರಿಸುವ ಸಮಯದಲ್ಲಿ ಕಡ್ಡಾಯವಾಗಿ ಅವರ ಗುರುತಿನ ಚೀಟಿಯನ್ನು ಪರಿಶೀಲಿಸಿ ಇಂಧನ ಭರಿಸಬೇಕೆಂದು ಪೆಟ್ರೋಲ್ ಬಂಕ್ ಮಾಲೀಕರಿಗೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚಿಸಿದ್ದಾರೆ.

ಈ ಮೂಲಕ ಬೇಕಾ ಬಿಟ್ಟಿಯಾಗಿ ರಸ್ತೆಗಳ ಮೇಲೆ ಸಂಚರಿಸುವ ವಾಹನಗಳಿಗೆ ಬ್ರೇಕ್ ಹಾಕಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಜರುಗಿಸಿದೆ. ಈಗಾಗಲೇ ಕಲಬುರಗಿಯಲ್ಲಿ ಮೂವರಿಗೆ ಕೊರೊನಾ ಸೋಂಕು ತಗುಲಿರುವುದು ವರದಿಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 64ಕ್ಕೆ ಏರಿದೆ.

Share This Article
Leave a Comment

Leave a Reply

Your email address will not be published. Required fields are marked *