ರಾಸಲೀಲೆ ಕೇಸ್‍ನಲ್ಲಿ ಸಿಕ್ಕಿಬಿದ್ದಿದ್ದ ಸ್ವಾಮಿಗೆ ಪೊಲೀಸ್ ಅಧಿಕಾರಿಗಳಿಂದ ಸನ್ಮಾನ

Public TV
1 Min Read

ಕೊಪ್ಪಳ: ಮಹಿಳೆಯೊಂದಿಗೆ ರಾಸಲೀಲೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಕಾಮಿ ಸ್ವಾಮಿಗೆ ಪೊಲೀಸ್ ಇಲಾಖೆ ಅಧಿಕಾರಿಗಳು ಸನ್ಮಾಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಗಂಗಾವತಿಯ ಕಲ್ಮಠದ ಕೊಟ್ಟೂರು ಮಠಕ್ಕೆ ಪೊಲೀಸ್ ಅಧಿಕಾರಿಗಳು ದೀಪಾವಳಿಯ ಹಬ್ಬದಂದು ಬಂದಿದ್ದರು. ಈ ವೇಳೆ ಮಠದ ಕಾಮಿ ಸ್ವಾಮಿಯನ್ನು ಸನ್ಮಾನಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಈ ನಡೆಯ ಬಗ್ಗೆ ಸಾರ್ವಜನಿಕರಿಂದ ತೀವ್ರ ಅಸಮಾಧಾನ ಎದುರಾಗಿದೆ.

ಕೊಟ್ಟೂರು ಮಠದ ಸ್ವಾಮಿ ಎರಡು ವರ್ಷಗಳ ಹಿಂದೆ ಖಾಸಗಿ ಹೋಟೆಲೊಂದರಲ್ಲಿ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದರು. ಅಂದಿನಿಂದ 6 ತಿಂಗಳುಗಳ ಕಾಲ ನಾಪತ್ತೆಯಾಗಿದ್ದ ಕಾಮಿ ಸ್ವಾಮಿ ಅನೇಕ ರಾಜಕೀಯ ಪ್ರಭಾವ ಬಳಸಿಕೊಂಡು ಮತ್ತೆ ಮಠಕ್ಕೆ ಬಂದಿದ್ದರು. ಇದನ್ನೂ ಓದಿ: ಕಲ್ಮಠದ ಕೊಟ್ಟೂರು ಸ್ವಾಮಿಯ ಕಾಮಪುರಾಣ ಬಯಲು- ಟೀಚರ್, ಅಡುಗೆ ಮಹಿಳೆ, ಲೈಬ್ರೇರಿಯನ್ ಯಾರನ್ನೂ ಬಿಟ್ಟಿಲ್ಲ ಈ ಸ್ವಾಮಿ

ಕಾಮಿ ಸ್ವಾಮಿಯನ್ನ ಸನ್ಮಾನಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪೊಲೀಸ್ ಇಲಾಖೆ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬರುತ್ತಿವೆ.

https://www.youtube.com/watch?v=utpp_AldyJw

Share This Article
Leave a Comment

Leave a Reply

Your email address will not be published. Required fields are marked *