ನಟಿ ಕಂಗನಾರನ್ನು ಹುಚ್ಚಾಸ್ಪತ್ರೆಗೆ ಸೇರಿಸ್ಬೇಕು ಇಲ್ಲವೇ ಜೈಲಿಗೆ ಹಾಕ್ಬೇಕು: ಮಂಜಿಂದರ್‌ ಸಿಂಗ್‌

Public TV
1 Min Read

ನವದೆಹಲಿ: ನಟಿ ಕಂಗನಾ ರಣಾವತ್‌ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಇಲ್ಲವೇ ಜೈಲಿಗೆ ಹಾಕಬೇಕು ಎಂದು ಮಾಜಿ ಶಾಸಕ ಹಾಗೂ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಅಧ್ಯಕ್ಷ ಮಂಜಿಂದರ್‌ ಸಿಂಗ್‌ ಸಿರ್ಸಾ ಅವರು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಂಡ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಕಂಗನಾ, ಸಿಖ್‌ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಕಂಗನಾ ವಿರುದ್ಧ ದೆಹಲಿ ಸಿಖ್‌ ಗುರುದ್ವಾರ ಮ್ಯಾನೇಜ್‌ಮೆಂಟ್‌ ಕಮಿಟಿ (ಡಿಎಸ್‌ಜಿಎಂಸಿ) ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ಅನುಷ್ಕಾ ಸಂಗೀತ ಸಮಾರಂಭದಲ್ಲಿ ಕುಣಿದು ಕುಪ್ಪಳಿಸಿದ ಆಲಿಯಾ

ಕಂಗನಾ ರಣಾವತ್‌ ಅವರು ಅತ್ಯುತ್ತಮ ನಟನಾ ಕೌಶಲ ಹೊಂದಿದ್ದಾರೆ. ಅದರೊಂದಿಗೆ ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಸಿಂಗ್‌ ಅವರು ಹೇಳಿದ್ದಾರೆ. ಇದನ್ನೂ ಓದಿ: ಗೇಮ್ ಆಡುತ್ತಾ ಹಳಿ ಮೇಲೆ ಕುಳಿತ ಬಾಲಕರ ಮೇಲೆ ಹರಿದ ರೈಲು

ಆಕೆಯನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಇಲ್ಲವೇ ಜೈಲಿಗೆ ಹಾಕಬೇಕು. ಇನ್‌ಸ್ಟಾಗ್ರಾಂನಲ್ಲಿ ಅವರ ವಿರೋಧಾಭಾಸ ಹೇಳಿಕೆಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಿಂಗ್‌ ಅವರು ಟ್ವಿಟರ್‌ನಲ್ಲಿ ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *