ಆಧುನಿಕ ರೈತನಿಗೆ ಬಿಗ್‍ಬಾಸ್ ಕಿರೀಟ

Public TV
2 Min Read

ಬೆಂಗಳೂರು: ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ ವಿನ್ನರ್ ಶಶಿಕುಮಾರ್ 50 ಲಕ್ಷ ರೂಪಾಯಿ ಮತ್ತು ಆಕರ್ಷಕ ಟ್ರೋಫಿಯನ್ನ ತಮ್ಮದಾಗಿಸಿಕೊಂಡರು.

ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿತ್ತು. ಬಳಿಕ ಮಾತನಾಡಿದ, ಶಶಿ ಇದು ನನ್ನೊಬ್ಬನ ಗೆಲುವಲ್ಲ, ಇದು ಎಲ್ಲರ ಗೆಲುವು ಎಂದರು. ನನಗೆ ಬಂದ ಬಹುಮಾನದ ಹಣವನ್ನು ರೈತಾಪಿ ವರ್ಗದ ಕಲ್ಯಾಣಕ್ಕೆ, ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆಗೆ ಮತ್ತು ಬೇಸಾಯದತ್ತ ಯುವಕರನ್ನು ಸೆಳೆಯುವುದಕ್ಕೆ ಬಳಸವುದಾಗಿ ಬಿಗ್‍ಬಾಸ್ ವಿನ್ನರ್ ಘೋಷಿಸಿದರು. ರನ್ನರ್ ಅಪ್ ನವೀನ್ ಸಜ್ಜು ಅವರ ಕನಸನ್ನು ನನಸು ಮಾಡೋದಾಗಿ ಕಿಚ್ಚ ಸುದೀಪ್ ಘೋಷಿಸಿದರು. ನನ್ನ ಕಡೆಯಿಂದ ರನ್ನರ್ ಅಪ್‍ಗೆ ಸ್ಪೆಷಲ್ ಗಿಫ್ಟ್ ಇರೋದಾಗಿ ನಟ ಕಿಚ್ಚ ಸುದೀಪ್ ಭರವಸೆ ನೀಡಿದ್ರು.

ಸೀಸನ್ -6ರ 12ನೇ ಕಂಟೆಸ್ಟೆಂಟ್ ಆಗಿ ಶಶಿ ಬಿಗ್‍ಬಾಸ್ ಮನೆಯೊಳಗೆ ಎಂಟ್ರಿ ನೀಡಿದ್ದರು. ಮಾಡರ್ನ್ ರೈತ ಅಂತಾನೇ ಫೇಮಸ್ ಆಗಿದ್ದ ಇವರು, ಎಲ್ಲಾ ಟಾಸ್ಕ್‍ಗಳನ್ನ ಕೂಡ ಚೆನ್ನಾಗಿಯೇ ಮಾಡಿದ್ದರು. ಹೀಗಾಗಿ, ರೈತನೊಬ್ಬ ಮೊದಲ ಬಾರಿಗೆ ಬಿಗ್ ಬಾಸ್ ಗೆಲ್ತಾನೆ ಅನ್ನೋ ಮಾತು ಕೇಳಿ ಬಂದಿತ್ತು. ಅದರಂತೆ ಶಶಿಕುಮಾರ್ ಬಿಗ್‍ಬಾಸ್ ಸೀಜನ್ -6 ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ.

ಬಿಗ್‍ಬಾಸ್ ಮನೆಯೊಳಗೆ ಎಂಟ್ರಿ ನೀಡಿದ್ದ 20 ಮಂದಿಯಲ್ಲಿ ಕೊನೆಗೆ ಮೂವರು ಉಳಿದಿದ್ರು. ಕವಿತಾ ಮೊದಲು ಮನೆಯಿಂದ ಹೊರಬಂದರು. ಶಶಿ, ನವೀನ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಗಾಯಕ ನವೀನ್ ಸಜ್ಜು ಅವರೇ ವಿನ್ ಆಗುತ್ತಾರೆ ಅನ್ನೋ ಅಭಿಪ್ರಾಯ ಬಹುತೇಕರಲ್ಲಿತ್ತು. ಆದ್ರೆ ಅದು ಸುಳ್ಳಾಗಿದೆ. ಮಾಡರ್ನ್ ರೈತ ಶಶಿ ಬಿಗ್‍ಬಾಸ್ ವಿನ್ನರ್ ಆಗಿದ್ದಾರೆ. ಈ ಸಂಬಂಧ ಸೋಶಿಯಲ್ ಮಿಡಿಯಾದಲ್ಲಿ ಭಾರೀ ಚರ್ಚೆ ನಡೆದಿದೆ. ಶಶಿ ಬಿಗ್‍ಬಾಸ್ ವಿನ್ನರ್.. ನವೀನ್ ಸಜ್ಜು ಜನರ ದಿಲ್‍ದಾರ್ ಎಂಬ ಡೈಲಾಗ್ ಹೊರಬೀಳುತ್ತಿವೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *