ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು – ಮತ್ತೆ ಕನ್ನೇರಿ ಶ್ರೀ ವಿವಾದಾತ್ಮಕ ಹೇಳಿಕೆ

2 Min Read

ಚಿಕ್ಕೋಡಿ: ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು ಎಂದು ಹೇಳುವ ಮೂಲಕ ಕೊಲ್ಲಾಪುರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ (Kanneri Shri) ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibhag) ಪಟ್ಟಣದಲ್ಲಿ ಭಜರಂಗದಳ ಆಯೋಜಿಸಿದ್ದ ಹನುಮ ಮಾಲಾ ಧೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮಾಲೆ ಪೊಲೀಸ್ ಇದ್ದಹಾಗೆ, ನಮ್ಮನ್ನು ಕೆಟ್ಟ ಕೆಲಸ ಮಾಡಲು ಬಿಡುವುದಿಲ್ಲ. ಏನಾದ್ರೂ ತಪ್ಪು ಕೆಲಸ ಮಾಡಲು ಹೊರಟ್ರೆ, ಅದು ನಮ್ಮನ್ನು ತಡೆಯುತ್ತೆ. ನಮ್ಮಲ್ಲಿ ಪಂಡರಾಪುರಕ್ಕೆ ಹೋಗುವವರು ಮಾಲೆ ಹಾಕಿಕೊಳ್ಳುತ್ತಾರೆ. ಯಾರಾದ್ರೂ ಮದ್ಯದಂಗಡಿ ಕಡೆ ಹೊರಟ್ರೆ, ಕೊರಳಿನಲ್ಲಿರುವ ಪೊಲೀಸ್ ನಮ್ಮನ್ನು ತಡೆಯುತ್ತೆ. ಮತ್ತೆ ಯಾರಾದ್ರೂ ಅಡ್ಡೆಗೆ ಹೊರಟಿದ್ರೆ, ನಾನು ಕೊರಳಲ್ಲಿ ಇದ್ದೇನೆ. ಬಾ ಈ ಕಡೆ ಎಂದು ಕರೆಯುತ್ತೆ. ಈ ಮಾಲೆ ಮಾತನಾಡುವುದಿಲ್ಲ. ಹನುಮ ಮಾಲೆಯ ಕುರಿತು ಕೆಲವರು ಟೀಕೆ ಮಾಡಬಹುದು. ಕಮ್ಯುನಿಸ್ಟರು ಹಾಗೂ ನಮ್ಮಂಥ ಕಾವಿ ಬಟ್ಟೆ ಧರಿಸಿರುವ ಬಸವ ತಾಲಿಬಾನಿಗಳು ಮಾಲೆ ಬಗ್ಗೆ ಟೀಕೆ ಮಾಡಬಹುದು ಎಂದು ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಿವಾದಾತ್ಮಕ ಪದ ಬಳಕೆ ಮಾಡಿದ್ದಾರೆ.ಇದನ್ನೂ ಓದಿ: ಧಾರವಾಡ ಜಿಲ್ಲಾಡಳಿತಕ್ಕೆ ಹಿನ್ನಡೆ – ಕನ್ನೇರಿ ಶ್ರೀಗಳ ಪ್ರವೇಶಕ್ಕೆ ಅನುಮತಿ

ಕೈಯಲ್ಲಿ ಬಡಗಿ ಹಿಡಿದು ಅಡ್ಡಾಡಿದ್ದನ್ನ ವಿರೋಧ ಮಾಡುತ್ತಾರೆ. ಬಡಗಿ ಬದಲು ಏನು ಆರತಿ ತಟ್ಟೆ ಹಿಡಿದುಕೊಳ್ಳಬೇಕಾ? ನಮ್ಮ ಹುಡುಗಿಯರನ್ನ ಹೊತ್ತುಕೊಂಡು ಹೋಗುತ್ತಿದ್ದಾರೆ. ಅಂಥವರನ್ನ ಹಿಡಿದುಕೊಂಡು ಬಂದು ತಿಳಿಯುವ ಭಾಷೆಯಲ್ಲಿ ಹೇಳಬೇಕು. ಸನ್ಯಾಸಿಯಾಗಿ ಗಡ್ಡ ಬಿಡುತ್ತಿದ್ದರು. ನಾನು ತಿಳಿ ಹೇಳಿದ ಮೇಲೆ ತಲೆ ಬೋಳಿಸಿಕೊಂಡು ಪೇಟಾ ಸುತ್ತುತ್ತಿದ್ದಾರೆ. ರಾತ್ರಿ ಟೀ ಶರ್ಟ್, ಬರ್ಮೋಡ ಹಾಕೋದು, ಹೋಟೆಲ್, ಬಾರ್‌ಗೆ ಹೋಗೋದು ಅಂತವರಿಗೆ ಮಠ ಏಕೆ? ಮಠಗಳನ್ನು ಏಕೆ ಹಾಳು ಮಾಡ್ತಾ ಇದ್ದೀರಿ? ಇಂಥವರಿಗೆ ಸನ್ಯಾಸತ್ವ ಯಾಕೆ ಬೇಕು? ಹೀಗಿದ್ದರೆ ಮಠ ಬಿಟ್ಟು ಹೋಗಿ ಎಂದು ಸ್ವಾಮೀಜಿಗಳ ಕುರಿತು ಹರಿಹಾಯ್ದಿದ್ದಾರೆ.

ಇದಕ್ಕೂ ಮುನ್ನ ಬಹಳಷ್ಟು ಸಂಪ್ರದಾಯಗಳ ಬಗ್ಗೆ ಕನ್ನೇರಿ ಶ್ರೀ ಟೀಕೆ ಮಾಡಿದ್ದಕ್ಕೆ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳ ಪ್ರವೇಶ ನಿರ್ಬಂಧಿಸಿದ್ದರು. ಇದನ್ನೂ ಓದಿ: ಲಿಂಗಾಯತ ಧರ್ಮದ ಬಗ್ಗೆ ಅವಹೇಳನ; ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್!

Share This Article