ಅಮೃತಧಾರೆ ಸೀರಿಯಲ್‌ಗೆ ‘ಕಾಂತಾರ’ ನಟಿ ಎಂಟ್ರಿ

Public TV
1 Min Read

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ‘ಕಾಂತಾರ’ (Kantara) ಬ್ಯೂಟಿ ಸಪ್ತಮಿ ಗೌಡ (Saptami Gowda) ಅವರು ಟಿವಿ ಪ್ರೇಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಪ್ತಮಿ ಇದೀಗ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಹಾಗಾದ್ರೆ ಸಿನಿಮಾ ಬಿಟ್ಟು ಸೀರಿಯಲ್‌ಗೆ ಎಂಟ್ರಿ ಕೊಟ್ರಾ? ಅಂತ ನೀವು ಅಂದುಕೊಂಡಿರಬಹುದು. ಆದರೆ ಅಸಲಿ ವಿಚಾರ ಬೇರೆ ಇದೆ.

ರಿಷಬ್ ಶೆಟ್ಟಿ (Rishab Shetty) ಅವರಿಗೆ ನಾಯಕಿಯಾಗಿ ‘ಕಾಂತಾರ’ ಮೂಲಕ ಸಕ್ಸಸ್ ಕಂಡ ನಟಿ ಸಪ್ತಮಿ ಇದೀಗ ಬಹುಭಾಷೆಗಳಲ್ಲಿ ಮಿಂಚುತ್ತಿದ್ದಾರೆ. ಇದರ ನಡುವೆ ಕಿರುತೆರೆಗೆ ಸಪ್ತಮಿ ಹಾಜರಿ ಹಾಕಿದ್ದಾರೆ. ಇತ್ತೀಚೆಗೆ ‘ಶ್ರೀರಸ್ತು ಶುಭಮಸ್ತು’ ಸೀರಿಯಲ್‌ನಲ್ಲಿ ಅತಿಥಿಯಾಗಿ ಕಾಣಿಸಿಕೊಂಡಿದ್ದರು. ಈಗ ಮತ್ತೆ ಜನಪ್ರಿಯ ‘ಅಮೃತಧಾರೆ’ ಸೀರಿಯಲ್‌ನಲ್ಲಿ ಸಪ್ತಮಿ ಕಾಣಿಸಿಕೊಂಡಿದ್ದಾರೆ.

ಸೀರಿಯಲ್ ಪ್ರಚಾರಕ್ಕೆ ಸಪ್ತಮಿ ಬಂದಿದ್ದಾರೆ. ಈ ಹಿಂದೆ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯ ಪಾತ್ರಗಳ ನಿರೂಪಣೆ ಮಾಡಿದ್ದರು. ಈಗ ಅದೇ ರೀತಿ ‘ಅಮೃತಧಾರೆ’ (Amruthadaare) ಸೀರಿಯಲ್ ನಿರೂಪಣೆ ಮಾಡಿದ್ದಾರೆ. ತಂಗಿ ಅಪೇಕ್ಷಾ ಮದುವೆಯಲ್ಲಿ ನಡೆಯುತ್ತಿರುವ ಮೋಸದಾಟದ ವಿರುದ್ಧ ನಾಯಕಿ ಭೂಮಿಕಾ (ನಟಿ ಛಾಯಾ ಸಿಂಗ್) ತಿರುಗಿ ಬೀಳುತ್ತಾರೆ. ಖಳನಾಯಕ ಜಯದೇವ್ ಕಳ್ಳಾಟವನ್ನು ನಾಯಕಿ ಬಯಲು ಮಾಡುತ್ತಾರೆ. ಮುಂದೆ ಏನಾಗುತ್ತೆ ಎಂಬುದೇ ಟ್ವಿಸ್ಟ್. ಇದನ್ನು ಸಪ್ತಮಿ ನಿರೂಪಣೆ ಮಾಡುವ ಮೂಲಕ ಸೀರಿಯಲ್ ಕುರಿತು ಮತ್ತಷ್ಟು ಕುತೂಹಲ ಮೂಡುವಂತೆ ಮಾಡಿದ್ದಾರೆ. ಸದ್ಯ ರಿವೀಲ್ ಆಗಿರೋ ಸಪ್ತಮಿ ಪ್ರೋಮೋ ಸದ್ದು ಮಾಡುತ್ತಿದೆ.

‘ಕಾಂತಾರ’ (Kantara) ಚಿತ್ರದ ಸಕ್ಸಸ್ ಅನ್ನು ನಟಿ ಸದುಪಯೋಗಪಡಿಸಿಕೊಂಡಿದ್ದಾರೆ. ಕನ್ನಡದ ಜೊತೆ ಜೊತೆಗೆ ಬಾಲಿವುಡ್ ಸಿನಿಮಾಗಳಲ್ಲಿ ಸಪ್ತಮಿ ಬ್ಯುಸಿಯಾಗಿದ್ದಾರೆ. ಟಾಲಿವುಡ್‌ನಲ್ಲಿಯೂ ಕನ್ನಡದ ಬೆಡಗಿಗೆ ಸಖತ್ ಬೇಡಿಕೆಯಿದೆ.

ತೆಲುಗು ಅಂಗಳದಲ್ಲಿ ಮೊದಲೇ ಕನ್ನಡತಿಯರ ದರ್ಬಾರ್ ಜಾಸ್ತಿಯಾಗಿದೆ. ರಶ್ಮಿಕಾ ಮಂದಣ್ಣ, ಶ್ರೀಲೀಲಾ, ರುಕ್ಮಿಣಿ ವಸಂತ್ ಮಧ್ಯೆ ಸಪ್ತಮಿ ಕೂಡ ತಮ್ಮ ಚಾರ್ಮ್ ಉಳಿಸಿಕೊಂಡಿದ್ದಾರೆ. ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ತಿದ್ದಾರೆ.

Share This Article