ರಾಷ್ಟ್ರಪತಿ ಭವನದಲ್ಲಿ ‘ಕಾಂತಾರ’ ಪ್ರದರ್ಶನ – ರಿಷಬ್‌ ಚಿತ್ರತಂಡದ ಜೊತೆ ದ್ರೌಪದಿ ಮುರ್ಮು ಸಿನಿಮಾ ವೀಕ್ಷಣೆ

1 Min Read

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಾಪ್ಟರ್‌ 1 (Kantara Chapter 1) ಸಿನಿಮಾ ವಿಶ್ವದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಾಷ್ಟ್ರಪತಿ ಭವನದಲ್ಲಿ ಇಂದು (ಭಾನುವಾರ) ದ್ರೌಪದಿ ಮುರ್ಮು (Droupadi Murmu) ಅವರು ಸಿನಿಮಾ ವೀಕ್ಷಿಸಲಿದ್ದಾರೆ.

- Advertisement -

ನಟ, ನಿರ್ದೇಶಕ ರಿಷಬ್‌ ಶೆಟ್ಟಿ (Rishab Shetty), ನಟಿ ರುಕ್ಮಿಣಿ ವಸಂತ್‌, ನಿರ್ಮಾಪಕ ಚಲುವೆ ಗೌಡ ಸಮ್ಮುಖದಲ್ಲಿ ಸಿನಿಮಾ ಪ್ರದರ್ಶನ ಮಾಡಲಾಗುವುದು. ಬಳಿಕ ಚಿತ್ರತಂಡವನ್ನು ರಾಷ್ಟ್ರಪತಿಗಳು ಗೌರವಿಸಲಿದ್ದಾರೆ. ಇದನ್ನೂ ಓದಿ: ಕಾಂತಾರ ನಮ್ಮ ಗ್ರಹಿಕೆಯನ್ನು ಮೀರಿದ್ದು- ಹೊಗಳಿ ವೀಕ್ಷಿಸುವಂತೆ ಕನ್ನಡಿಗರಲ್ಲಿ ನಾರಾಯಣ ಗೌಡ ಮನವಿ

- Advertisement -

- Advertisement -

ಅ.2 ರಂದು ಸಿನಿಮಾ ಬಿಡುಗಡೆಯಾದಾಗಿನಿಂದ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆಯುತ್ತಿದೆ. ರಿಲೀಸ್‌ ಆದ 3 ದಿನದಲ್ಲೇ 160ಕ್ಕೂ ಹೆಚ್ಚು ಕೋಟಿ ಗಳಿಕೆ ಮಾಡಿದೆ. ಈ ಸಿನಿಮಾವನ್ನು ಹೊಂಬಾಳೆ ಫಿಲಂಸ್‌ ಅಡಿ ವಿಜಯ್‌ ಕಿರಗಂದೂರು ಮತ್ತು ಚಲುವೆ ಗೌಡ ನಿರ್ಮಾಣ ಮಾಡಿದ್ದಾರೆ.

- Advertisement -

ಕಾಂತಾರ ಚಾಪ್ಟರ್‌ 1 ಸಿನಿಮಾ ಬಗ್ಗೆ ಸ್ಟಾರ್‌ ನಟರು, ನಿರ್ದೇಶಕರು, ರಾಜಕಾರಣಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾಗೆ ಪ್ರೇಕ್ಷಕರಿಂದಲೂ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಗಿದೆ. ಇದನ್ನೂ ಓದಿ: ಭಾನುವಾರವೂ ಹೌಸ್‌ಫುಲ್‌ – ಬೆಂಗಳೂರಿನಲ್ಲಿ ದಾಖಲೆ ಬರೆದ ಕಾಂತಾರ

Share This Article