ಸೆಲ್ಫಿ ಕ್ಲಿಕ್ಕಿಸಿಕೊಂಡು ಕಪಿಲಾ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ

Public TV
1 Min Read

ಮೈಸೂರು: ಕಪಿಲಾ ನದಿ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಬಳಿಕ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಂಡಿಪಾಳ್ಯ ಗ್ರಾಮದ ನಿವಾಸಿಗಳಾದ ಮುಂಜುಳಾ(38) ಹಾಗೂ ಸೌಮ್ಯ(19) ಆತ್ಮಹತ್ಯೆ ಮಾಡಿಕೊಂಡವರು. ಮನೆಯವರಿಗೆ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ತಾಯಿ, ಮಗಳು ತೆರಳಿದ್ದರು. ಆದರೆ ನದಿಯ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಂಡ ನಂತರ ನದಿಗೆ ಹಾರಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಯಿ, ಮಗಳ ಮೃತದೇಹ ನೀರಿನಲ್ಲಿ ತೇಲುತ್ತಿದ್ದುದನ್ನು ನೋಡಿದ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಬಂದು ಮೃತದೇಹಗಳನ್ನು ನದಿಯಿಂದ ಹೊರ ತೆಗೆದಿದ್ದಾರೆ.

ಸದ್ಯ ತಾಯಿ, ಮಗಳ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *