ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ. ಮಾರ್ಚ್ 4 ರಿಂದ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಲಿದೆ. ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ದತೆಗಳನ್ನ ಮಾಡಿಕೊಂಡಿದೆ. ಪರೀಕ್ಷಾ ಅಕ್ರಮ ತಡೆಗೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದೆ. ಅಕ್ರಮ ತಡೆಗೆ 11 ಅಂಶಗಳ ನಿಯಮಗಳನ್ನ ಜಾರಿಗೆ ತಂದು ಸುತ್ತೋಲೆ ಹೊರಡಿಸಿದೆ.
ಎಸ್.ಎಸ್.ಎಲ್.ಸಿ ಪೂರ್ವ ಸಿದ್ದತಾ ಪರೀಕ್ಷೆ ಪೇಪರ್ ಲೀಕ್ ನಿಂದ ಆತಂಕಗೊಂಡಿರೋ ಪಿಯಸಿ ಬೋರ್ಡ್, ಪಿಯುಸಿ ಎಕ್ಸಾಂ ನಲ್ಲಿ ಇಂತಹ ಎಡವಟ್ಟು ಆಗದಂತೆ ನೋಡಿಕೊಳ್ಳಲು ಹದ್ದಿನ ಕಣ್ಣಿಟ್ಟಿದೆ. ಪರೀಕ್ಷಾ ಅಕ್ರಮದಲ್ಲಿ ತೊಡಗಿದವರಿಗೆ ನಿಯಮದ ಪ್ರಕಾರ 5 ವರ್ಷ ಸೆರೆವಾಸ ಮತ್ತು 5 ಲಕ್ಷ ದಂಡ ವಿಧಿಸುವ ಕಾನೂನು ಕಟ್ಟುನಿಟ್ಟಾಗಿ ಜಾರಿಗೆ ತರಲು ಆದೇಶ ಹೊರಡಿಸಿದೆ.
ಇಷ್ಟೇ ಅಲ್ಲದೇ ಹೊರತು ಪಡಿಸಿ ಪಿಯಸಿ ಬೋರ್ಡ್ ಹಲವು ಭದ್ರತಾ ನಿಯಮಗಳನ್ನ ಜಾರಿಗೆ ತಂದಿವೆ. ಈ ಸಂಬಂಧ ಪಿಯುಸಿ ಬೋರ್ಡ್ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು, ಪರೀಕ್ಷಾ ಸಿಬ್ಬಂದಿ ಮೊಬೈಲ್ ಫೋನ್ ತರುವುದನ್ನು ನಿಷೇಧ ಮಾಡಲಾಗಿದೆ. ಗುರುತಿನ ಚೀಟಿ ಹೊಂದಿದವರಿಗೆ ಮಾತ್ರ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅನುಮತಿ ಸೂಚನೆ ನೀಡಲಾಗಿದೆ.ಪರೀಕ್ಷಾ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಗಳಿಗೂ ಗುರುತಿನ ಚೀಟಿ ಹೊಂದಿರೋದು ಕಡ್ಡಾಯವಾಗಿದೆ. ಉಳಿದ
ಪ್ರಮುಖ ನಿಯಮ ಏನು?
– ಪರೀಕ್ಷಾ ಕಾರ್ಯಕ್ಕೆ ಅಡ್ಡಿ ಮಾಡಿದ್ರೆ ಪೊಲೀಸ್ ಠಾಣಯಲ್ಲಿ ಎಫ್ಐಆರ್ ದಾಖಲು ಮಾಡಲು ಅಧಿಕಾರಿಗಳಿಗೆ ಸೂಚನೆ.
– ಪರೀಕ್ಷಾ ಕೇಂದ್ರ ಸುತ್ತ 200 ಮೀಟರ್ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡುವುದು.
– ಪರೀಕ್ಷಾ ಕೇಂದ್ರದಲ್ಲಿ ಕ್ಯಾಮೆರಾ ಲ್ಯಾಪ್ಟಾಪ್, ಮೊಬೈಲ್ ಸೇರಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದಕ್ಕೆ ನಿಷೇಧ
– ನಕಲು ಮಾಡೋದು, ನಕಲಿಗೆ ಸಹಕಾರ, ಬದಲಿ ವ್ಯಕ್ತಿ ಪರೀಕ್ಷೆ ಬರೆಯೋದು, ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಸಮಯದಲ್ಲಿ ಮೊಬೈಲ್ ಬಳಕೆಗಳು ಪರೀಕ್ಷಾ ಅಕ್ರಮ ಅಂತ ಪರಿಗಣನೆ
– ಕೊಠಡಿ ಮೇಲ್ವಿಚಾರಕರು, ಮುಖ್ಯ ಅಧೀಕ್ಷಕರು ಅಕ್ರಮ ಎಸಗಿದರೆ ಕಾನೂನು ಅನ್ವಯ ಕ್ರಮಕ್ಕೆ ಸೂಚನೆ
– ಸಾಮಾನ್ಯ ವಾಚ್ ಗಳನ್ನು ಮಾತ್ರ ವಿದ್ಯಾರ್ಥಿಗಳಿಗೆ ಧರಿಸಲು ಅವಕಾಶ