ರಾಜ್ಯದ ಎಲ್ಲಾ 224 ಕ್ಷೇತ್ರದಲ್ಲೂ AAP ಸ್ಪರ್ಧೆ – ಫೆ.26ಕ್ಕೆ ದಾವಣಗೆರೆಗೆ ಅರವಿಂದ್ ಕೇಜ್ರಿವಾಲ್ ಭೇಟಿ

Public TV
1 Min Read

ದಾವಣಗೆರೆ: ಆಮ್ ಆದ್ಮಿ ಪಕ್ಷದಿಂದ (AAP) ರಾಜ್ಯದ ಎಲ್ಲಾ 224 ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಹಾಗಾಗಿ ಫೆಬ್ರವರಿ 26 ರಂದು ದಾವಣಗೆರೆಯಲ್ಲಿ (Davanagere) ರಾಜ್ಯಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ (Arvind Kejriwal) ಆಗಮಿಸಲಿದ್ದಾರೆ.

ಈ ಬಗ್ಗೆ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಡಾ.ವಿಶ್ವನಾಥ್ ಸುದ್ದಿಗೋಷ್ಠಿ ನಡೆಸಿ, ಮುಂಬರುವ ರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ. ಫೆಬ್ರವರಿ 26 ರಂದು ದಾವಣಗೆರೆಯ ಕಾರ್ಯಕ್ರಮದ ನಂತರ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ನಗರದ ಎಸ್‍ಎಸ್ ಲೇಔಟ್‍ನಲ್ಲಿರುವ ರಿಂಗ್ ರಸ್ತೆ ಬಳಿ ದಾವಣಗೆರೆಯ ಕಾರ್ಯಾಲಯಕ್ಕೆ ಚಾಲನೆ ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮೂಡಿಗೆರೆ ಹಾಲಿ ಶಾಸಕನಿಗೆ ಟಿಕೆಟ್ ಇಲ್ಲ – ಗ್ರಂಥಪಾಲಕ ಬಿಜೆಪಿ ಅಭ್ಯರ್ಥಿ?

ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಾಫರ್ ಮೋಹಿಯುದ್ದೀನ್ ಮಾತನಾಡಿ, ದಾವಣಗೆರೆಯ ಎಲ್ಲಾ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಭ್ರಷ್ಟಾಚಾರ ರಹಿತ ಸರ್ಕಾರ ನಿರ್ಮಾಣ ನಮ್ಮ ಕನಸು. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು ಆಮ್ ಆದ್ಮಿಗೆ ಜನ ಬೆಂಬಲ ನೀಡುವ ಭರವಸೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *