ತಂದೆ-ತಾಯಿ, ಹೆಂಡತಿ, ಮಕ್ಕಳ ಜೊತೆ ಕಾಲ ಕಳೆಯಿರಿ: ಕಾರ್ಯಕರ್ತರಿಗೆ ಸಿದ್ದರಾಮಯ್ಯ ಸಲಹೆ

Public TV
2 Min Read

ಬೆಂಗಳೂರು: ಚುನಾವಣೆಗಾಗಿ (Election) ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಲಹೆ ನೀಡಿದರು.

ವಿಧಾನಸಭೆ ಮತದಾನಕ್ಕೆ ಬುಧವಾರ ತೆರೆ ಬಿದ್ದಿದೆ. ಮತದಾನದ ಮುಕ್ತಾಯದ ಬಳಿಕ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?:
ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿಯಾಗಿದೆ. ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ, ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ. ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು ಎಂದರು.

ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ಕಾಂಗ್ರೆಸ್ (Congress) ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ, ತಿಂಡಿ, ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು. ನಾನು ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಮಾತ್ರವಲ್ಲ, ಬೇರೆ ರಾಜ್ಯಗಳಿಂದಲೂ ಬಂದು ನನ್ನ ಮೇಲಿನ ಪ್ರೀತಿ-ಅಭಿಮಾನದಿಂದ ತಮ್ಮ ಪಾಡಿಗೆ ತಾವು ಪ್ರಚಾರ ಮಾಡಿದ್ದಾರೆ. ಇದನ್ನೂ ಓದಿ: ಕೇಂದ್ರ VS ದೆಹಲಿ ಸರ್ಕಾರ – ಸುಪ್ರೀಂ ಆದೇಶದಿಂದ ಆಪ್‌ಗೆ ಬಿಗ್‌ ವಿಕ್ಟರಿ

ಅವರೆಲ್ಲರನ್ನು ನನಗೆ ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಲು ಕೂಡಾ ಸಾಧ್ಯವಾಗಿಲ್ಲ. ಈ ಪ್ರೀತಿ ಮತ್ತು ಅಭಿಮಾನವೇ ನನ್ನ ಮತ್ತು ಕಾಂಗ್ರೆಸ್ ಪಕ್ಷದ ಶಕ್ತಿ. ಇವರೆಲ್ಲರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳನ್ನು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ನನಗಿಂತ ಗಟ್ಟಿ ಅಲ್ಲವೇ ಅಲ್ಲ: ಜಿಟಿಡಿ

Share This Article