ಅಭ್ಯರ್ಥಿಯಿಂದಲೇ ಚುನಾವಣಾ ಬಹಿಷ್ಕಾರ – ಮತಗಟ್ಟೆಗೆ ಏಜೆಂಟ್‍ಗಳನ್ನು ನೇಮಿಸದ ವಾಟಾಳ್

Public TV
1 Min Read

ಚಾಮರಾಜನಗರ: ಚಾಮರಾಜನಗರ (Chamarajanagar) ವಿಧಾನಸಭೆಗೆ ಪಕ್ಷೇತರವಾಗಿ ಸ್ಪರ್ಧಿಸಿರುವ ವಾಟಾಳ್ ನಾಗರಾಜ್ (Vatal Nagaraj) ಅವರು ಚುನಾವಣಾ ಬಹಿಷ್ಕಾರ ಮಾಡಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಯ (Karnataka Assembly Election) ಮತದಾನವು ಬೀರುಸಿನಿಂದ ನಡೆಯುತ್ತಿದೆ. ಆದರೆ ವಾಟಾಳ್ ನಾಗರಾಜ್ ಚುನಾವಣಾ ಬಹಿಷ್ಕಾರ ಮಾಡಿದ್ದಾರೆ. ಅಷ್ಟೇ ಅಲ್ಲದೇ ಏಜೆಂಟ್‍ಗಳನ್ನು ನೇಮಿಸದೇ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ. ಇದನ್ನೂ ಓದಿ: ಡಿಎಂಕೆ ಫೈಲ್ಸ್ ರಿಲೀಸ್ – ಅಣ್ಣಾಮಲೈ ವಿರುದ್ಧ ಮಾನನಷ್ಟ ಕೇಸ್

ಈ ಬಗ್ಗೆ ಮಾತನಾಡಿದ ಅವರು, ಇದು ಚುನಾವಣೆಯಲ್ಲ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮಂಗಳವಾರ ರಾತ್ರಿಯಿಡೀ ಮತದಾರರಿಗೆ ಹಣ ಹಂಚಿದ್ದಾರೆ. ಆದರೆ ನಾನು ಮತದಾರರಿಗೆ ಒಂದು ನಯಾಪೈಸೆ ಕೊಟ್ಟಿಲ್ಲ. ಚುನಾವಣಾಧಿಕಾರಿಗಳು ನಿಷ್ಕ್ರಿಯರಾಗಿದ್ದಾರೆ. ಇಂತಹ ಭ್ರಷ್ಟ ವ್ಯವಸ್ಥೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಚುನಾವಣಾ ವ್ಯವಸ್ಥೆ ಖಂಡಿಸಿ ಚುನಾವಣೆ ಬಹಿಷ್ಕಾರ ಮಾಡಿದ್ದೇನೆ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿಶೇಷ ಚೇತನನಿಂದ ಮತದಾನ – ಕಾಲು ಬೆರಳಿಗೆ ಶಾಯಿ ಹಾಕಿದ ಅಧಿಕಾರಿಗಳು

Share This Article