ಕಾವೇರಿಗಾಗಿ ನಾವು ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ : ವಾಟಾಳ್‌ ಆಕ್ರೋಶ

By
1 Min Read

ಬೆಂಗಳೂರು: ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ (Karnataka Bandh) ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್‌ (Vatal Nagaraj) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಾಲರ್ಸ್‌ ಕಾಲನಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು ಬಂದ್‌ ನಡೆಯುತ್ತಿದೆ. ನಾವು ಕಾವೇರಿಗಾಗಿ (Cauvery) ಬಂದ್‌ಗೆ ಕರೆ ನೀಡಿದರೆ ಸರ್ಕಾರ ನಮ್ಮ ಪ್ರತಿಭಟನೆಯನ್ನು ಬಂದ್‌ ಮಾಡುತ್ತಿದೆ. ಸರ್ಕಾರ ಕಾವೇರಿ ಸಮಸ್ಯೆಯನ್ನು ಅರ್ಥಮಾಡಿಕೊಂಡಿಲ್ಲ ಎಂದು ಸಿಟ್ಟು ಹೊರಹಾಕಿದರು.  ಇದನ್ನೂ ಓದಿ: ಕಾವೇರಿ ಕುರಿತು ಸಲಹೆ, ಮಾರ್ಗದರ್ಶನ ಪಡೆಯಲು ಇಂದು ಸಿಎಂ ಸಭೆ

ಬಂದ್‌ಗೆ ಬೆಂಬಲ ನೀಡಿದ ಜನತೆಗೆ ಧನ್ಯವಾದ ಹೇಳಿದ ವಾಟಾಳ್‌, ಅಖಂಡ ಕರ್ನಾಟಕ ಹೆಸರನ್ನು ಕನ್ನಡಿಗರು ಉಳಿಸಿದ್ದಾರೆ. ದೇಶಕ್ಕೆ ಕನ್ನಡಿಗರ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು.

ಇಂದು ವಾಟಾಳ್‌ ನಾಗರಾಜ್‌ ಬುರ್ಖಾ ಧರಿಸಿ ತಲೆಯ ಮೇಲೆ ನೀರಿನ ಖಾಲಿ ಕೊಡ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.


Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್