ಉತ್ತರ ಪ್ರದೇಶ, ತ್ರಿಪುರ ಬಳಿಕ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?

Public TV
2 Min Read

ಬೆಂಗಳೂರು: ಉತ್ತರ ಪ್ರದೇಶ, ತ್ರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಳಿಕ ಕರ್ನಾಟಕದಲ್ಲೂ ಬದಲಾವಣೆ ಬಹುತೇಕ ಖಚಿತ ಎನ್ನಲಾಗುತ್ತಿದೆ.

ರಾಜ್ಯಾಧ್ಯಕ್ಷರ ಬದಲಾವಣೆ ನಡೆಯುವುದಾದರೆ ಗಣೇಶೋತ್ಸವ ಬಳಿಕವೋ ಅಥವಾ ಸೆಪ್ಟೆಂಬರ್ ಎರಡನೇ ವಾರದಲ್ಲೋ ಎನ್ನುವ ಗೊಂದಲವಿದೆ. ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರನ್ನೇ ಮುಂದುವರೆಸಬೇಕೋ, ಬೇಡವೋ ಎಂಬುದರ ಬಗ್ಗೆಯೂ ಬಿಜೆಪಿ ಹೈಕಮಾಂಡ್ ಸ್ಪಷ್ಟನೆ ಕೊಟ್ಟಿಲ್ಲ. ಇದರ ನಡುವೆ ಸಚಿವರ ಸಂಪುಟ ವಿಸ್ತರಣೆ ಬಗ್ಗೆಯೂ ಹೈಕಮಾಂಡ್ ಸೈಲೈಂಟ್ ಆಗಿದೆ. ಸೆಪ್ಟಂಬರ್ 8ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ಹಾಗೂ ಸೆಪ್ಟಂಬರ್ 11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಂತರ ಹೈಕಮಾಂಡ್‍ನಿಂದ ಸರ್ಜರಿ ನಡೆಯಬಹುದಾ ಎಂಬ ಕುತೂಹಲ ಹೆಚ್ಚಾಗಿದೆ. ಇದನ್ನೂ ಓದಿ: ಅಕ್ಟೋಬರ್‌ ಎರಡನೇ ವಾರ 5G ಸೇವೆ ಆರಂಭ – 2030ರ ಒಳಗಡೆ ಭಾರತದಲ್ಲಿ 6G: ಮೋದಿ

ಚುನಾವಣಾ ವರ್ಷ ಆಗಿರುವುದರಿಂದಾಗಿ ಕಾರ್ಯಕರ್ತರು, ನಾಯಕರಲ್ಲಿ ಗೊಂದಲ ಇರಬಾರದೆಂದು ಹೈಕಮಾಂಡ್‍ಗೆ ಸಂಘದ ಕೆಲ ಪ್ರಮುಖರು, ಬಿಜೆಪಿಯ ಕೆಲ ಹಿರಿಯ ನಾಯಕರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಬಿಜೆಪಿ ನಿಯಮದಂತೆ ಆಗಸ್ಟ್ 28ಕ್ಕೆ ಕಟೀಲ್ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಪಕ್ಷಕ್ಕೆ ಅಗತ್ಯವಿದ್ದರೆ ಅವಧಿ ವಿಸ್ತರಿಸಬಹುದು ಅಥವಾ ಪುನರ್ ಆಯ್ಕೆ ಮಾಡಬಹುದು. ಸದ್ಯದ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ರಾಜ್ಯಾಧ್ಯಕ್ಷರ ರೇಸ್‍ನಲ್ಲಿ ಮೂವರ ಹೆಸರುಗಳು ಕೇಳಿಬರುತ್ತಿವೆ. ಸಿ.ಟಿ.ರವಿ, ಶೋಭಾ ಕರಂದ್ಲಾಜೆ ಹಾಗೂ ಸಚಿವ ಸುನಿಲ್ ಕುಮಾರ್ ಹೆಸರು ಮುಂಚೂಣಿಯಲ್ಲಿದೆ. ಇದನ್ನೂ ಓದಿ: ಫಸ್ಟ್‌ ಟೈಂ ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತ

ಚುನಾವಣಾ ದೃಷ್ಟಿಯಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಮರ್ಥರೊಬ್ಬರ ಆಯ್ಕೆ ಜೊತೆಗೆ ಪ್ರಧಾನ ಕಾರ್ಯದರ್ಶಿ ಮಟ್ಟದ ಪದಾಧಿಕಾರಿಗಳಾಗಿ ಕೆಲವರನ್ನು ನೇಮಕ ಮಾಡುವ ಬಗ್ಗೆ ಚರ್ಚೆ ನಡೀತಿದೆ. ಇದರೊಂದಿಗೆ ಆಡಳಿತಕ್ಕೆ ಚುರುಕು ಮುಟ್ಟಿಸಲು ಬೊಮ್ಮಾಯಿ ಸರ್ಕಾರದಲ್ಲೂ ಕೆಲ ಬದಲಾವಣೆ ನಡೆಯಬಹುದು. ಐದು ಖಾಲಿ ಸಚಿವ ಸ್ಥಾನಗಳ ಪೈಕಿ ನಾಲ್ಕು ಭರ್ತಿ ಮಾಡಿಕೊಳ್ಳುವ ಮೂಲಕ ಸಂಪುಟ ವಿಸ್ತರಣೆಗೆ ಪ್ಲಾನ್ ಮಾಡಲಾಗಿದೆ ಎನ್ನಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *