ಶುಕ್ರವಾರ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಮಂಡನೆ – ನಿರೀಕ್ಷೆಗಳೇನು?

Public TV
2 Min Read

ಬೆಂಗಳೂರು: ಚುನಾವಣೆ ಸನಿಹದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ (Karnataka Budget 2023) ಶುಕ್ರವಾರ ಮಂಡನೆಯಾಗಲಿದೆ. ವಿಧಾನಸಭೆಯಲ್ಲಿ ನಾಳೆ ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಮ್ಮ ಎರಡನೇ ಬಜೆಟ್ ಮಂಡಿಸಲಿದ್ದಾರೆ.

ತೆರಿಗೆ ಸಂಗ್ರಹದಲ್ಲಿ ನಿಗದಿತ ಗುರಿಗಿಂತ ಹೆಚ್ಚು ಸಂಗ್ರಹವಾಗಿದೆ. ಹೀಗಾಗಿ ಬಜೆಟ್ ಗಾತ್ರ ಇದೇ ಮೊದಲ ಬಾರಿಗೆ 3 ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ. ಚುನಾವಣೆ ಸನಿಹದಲ್ಲಿ ಇರುವುದರಿಂದ ಈ ಬಜೆಟ್ ಸಹಜವಾಗಿಯೇ ಜನಪ್ರಿಯತೆಯ ಹಳಿ ಮೇಲೆ ಸಾಗುವ ನಿರೀಕ್ಷೆ ಇದೆ. ಉಚಿತ ಘೋಷಣೆ ಒಳಗೊಂಡಂತೆ, ಜನತೆಗೆ ತೆರಿಗೆ ಹೊರೆ ಇಲ್ಲದ ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಪ್ಲಾನ್ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್-ಜೆಡಿಎಸ್‌ಗೆ ಟಕ್ಕರ್ ಕೊಟ್ಟು, ಮತ ಫಸಲು ತೆಗೆಯುವುದಕ್ಕೆ ಸಿಎಂ ಬೊಮ್ಮಾಯಿ ತಮ್ಮ ಬಜೆಟ್ ಮೂಲಕ ಪ್ರಯತ್ನಿಸಲಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರದ ಕಡೇ ಬಜೆಟ್- ಬೊಮ್ಮಾಯಿ ಬಜೆಟ್‌ನಲ್ಲಿ ಏನಿರಬಹುದು?

ಬಜೆಟ್ ಮುನ್ನಾ ದಿನವೇ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ನಾಳೆಯದ್ದು ಚುನಾವಣಾ ಪ್ರಣಾಳಿಕೆ ಬಜೆಟ್ ಎನ್ನುವುದು ನಮಗೆ ಗೊತ್ತಿದೆ. ಕಳೆದ ವರ್ಷದ ಬಜೆಟ್‌ನಲ್ಲಿ ಬರೀ ಘೋಷಣೆ, ಭರವಸೆಗಳ ಭಾಷಣವಷ್ಟೇ ಇತ್ತು. ಶೇಕಡಾ 90ರಷ್ಟು ಅನುಷ್ಠಾನಕ್ಕೆ ಬರಲಿಲ್ಲ ಎಂದು ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೊಮ್ಮಾಯಿ ಬಜೆಟ್; ನಿರೀಕ್ಷೆಗಳೇನು?
ಕಾಂಗ್ರೆಸ್‌ನ ಗೃಹ ಲಕ್ಷ್ಮಿ ಯೋಜನೆಗೆ ಪ್ರತಿಯಾಗಿ ಸ್ತ್ರೀಶಕ್ತಿ ಯೋಜನೆ, ರೈತರಿಗೆ ಬಡ್ಡಿರಹಿತ ಸಾಲ ಸೌಲಭ್ಯ 5 ಲಕ್ಷ ರೂ.ಗೆ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲದ ಮೊತ್ತ ಹೆಚ್ಚಳ ಸಾಧ್ಯತೆ, ಕುಲ ಕಸುಬುಗಳ ಪ್ರೋತ್ಸಾಹಕ್ಕೆ ವಿಶೇಷ ಯೋಜನೆ, ಹೋಬಳಿ ಮಟ್ಟದಲ್ಲೂ ನಮ್ಮ ಕ್ಲಿನಿಕ್ ಅನುಷ್ಠಾನ, ಬೆಂಗಳೂರು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್, ವಿವಿಧ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ; ಅನುದಾನ, ನೀರಾವರಿ ಯೋಜನೆಗಳಿಗೆ ಹೆಚ್ಚು ಹಣ ಮೀಸಲು, ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಅನುಷ್ಠಾನ, ಪುನೀತ್ ರಾಜ್‌ಕುಮಾರ್, ಅಂಬರೀಶ್ ಸ್ಮಾರಕ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಬಜೆಟ್‌ನಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ಅನುದಾನ: ಬೊಮ್ಮಾಯಿ ಭರವಸೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *