Karnataka Budget 2023: ರೈತರಿಗೆ ಬಂಪರ್‌ ಗಿಫ್ಟ್‌ – 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ

Public TV
1 Min Read

ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ರೈತರಿಗೆ (Farmers) ಬಂಪರ್‌ ಉಡುಗೊರೆ ನೀಡಲಾಗಿದೆ. ರೈತರಿಗೆ ಈಗ 3 ಲಕ್ಷದವರೆಗಿನ ನೀಡಲಾಗುತ್ತಿರುವ ಶೂನ್ಯ ಬಡ್ಡಿದರ ಸಾಲದ ಮೊತ್ತವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದರು.

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ರಫ್ತಿಗೆ ಒತ್ತು ನೀಡಲಾಗಿದೆ. ರೈತರ ಸಾಲ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಆ ಮೂಲಕ ರಾಜ್ಯದ 30 ಲಕ್ಷ ರೈತರಿಗೆ 25 ಸಾವಿರ ರೂ. ಕೋಟಿ ಸಾಲ ನೀಡಲಾಗುವುದು ಎಂದು ಸಿಎಂ ತಿಳಿಸಿದರು. ಇದನ್ನೂ ಓದಿ: Karnataka Budget – ಟಾರ್ಗೆಟ್‌ ಮೀರಿ ಅಬಕಾರಿ ಆದಾಯ ಭರ್ಜರಿ ಸಂಗ್ರಹ

ಪಿಎಂ ಶ್ರೀ ಯೋಜನೆ ಅಡಿಯಲ್ಲಿ ರೈತರಿಗಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. ಅಂತಾರಾಷ್ಟ್ರೀಯ ಸಿರಿ ಧಾನ್ಯ ವರ್ಷದ ಅಂಗವಾಗಿ ರೈತರಿಗೆ ಸಿರಿ ಧಾನ್ಯ ಉತ್ಪಾದನೆ ಪ್ರೋತ್ಸಾಹಿಸಲು ಪ್ರತಿ ಹೆಕ್ಟೇರ್‌ಗೂ ಪ್ರೋತ್ಸಾಹ ಧನ, ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ, ಅಡಿಕೆ ಬೆಳೆ ರೋಗ ನಿಯಂತ್ರಣಕ್ಕೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ ತೀರ್ಥಹಳ್ಳಿ ಕೃಷಿ ಕೇಂದ್ರಕ್ಕೆ 10 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.

ಕೃಷಿ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಹಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿದೆ. ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿಗಳ ಅಳವಡಿಕೆಯೊಂದಿಗೆ ರೈತರು ಮಾಹಿತಿಪೂರ್ಣ ನಿರ್ಧಾರ ಕೈಗೊಳ್ಳಲು ಪೂರಕ ಕ್ರಮಗಳನ್ನು ನಮ್ಮ ಸರ್ಕಾರ ಜಾರಿಗೊಳಿಸಲಿದೆ. ಇದಲ್ಲದೆ, ಕೃಷಿಯನ್ನು ಲಾಭದಾಯಕವಾಗಿಸಲು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಮತ್ತು ರಪ್ತಿಗೆ ಒತ್ತು ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯದಲ್ಲಿ ಸ್ಥಿರತೆಯನ್ನು ತರಲು ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದರು. ಇದನ್ನೂ ಓದಿ: ಮಹಿಳೆಯರ ಅನುಕೂಲಕ್ಕಾಗಿ ಬೆಂಗ್ಳೂರಿನಲ್ಲಿ 250 ಸುಸಜ್ಜಿತ ‘She Toilet’ ನಿರ್ಮಾಣ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *