ಬಿಜೆಪಿಯಿಂದ ಗದ್ದಲ – ರಾಜ್ಯಪಾಲರ ಭಾಷಣ ಅರ್ಧಕ್ಕೆ ಮೊಟಕು

Public TV
1 Min Read

ಬೆಂಗಳೂರು: ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ನಿರೀಕ್ಷೆಯಂತೆ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿದ್ದ ಪರಿಣಾಮ ರಾಜ್ಯಪಾಲರ ಭಾಷಣ ಅರ್ಧದಲ್ಲೇ ಮುಕ್ತಾಯಗೊಂಡಿದೆ.

ರಾಜ್ಯಪಾಲ ವಿ.ಆರ್.ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಬಿಜೆಪಿ ಸದಸ್ಯರು ಸದನದ ಭಾವಿಗೆ ಇಳಿದು ಸರ್ಕಾರಕ್ಕೆ ಸದಸ್ಯರ ಬೆಂಬಲ ಇಲ್ಲ ಎಂದು ಹೇಳಿ ಪ್ರತಿಭಟನೆಗೆ ಇಳಿದರು. ಪ್ರತಿಭಟನೆ ಜೋರಾಗುತ್ತಿದ್ದಂತೆ ರಾಜ್ಯಪಾಲರು ಅರ್ಧದಲ್ಲೇ ಭಾಷಣವನ್ನು ಮೊಟಕುಗೊಳಿಸಿದರು.

ಒಟ್ಟು 22 ಪುಟಗಳ ಭಾಷಣ ಸಿದ್ಧಗೊಂಡಿತ್ತು. ಬಿಜೆಪಿ ಪ್ರತಿಭಟನೆ ಹಿನ್ನಲೆ ಅರ್ಧಕ್ಕೆ ಭಾಷಣ ಮೊಟಕುಗೊಳಿಸಿ ರಾಜ್ಯಪಾಲ ವಿ.ಆರ್.ವಾಲಾ ತೆರಳಿದರು.

ಈ ಸರ್ಕಾರಕ್ಕೆ ಶಾಸಕರ ಬೆಂಬಲ ಇಲ್ಲ. ಹೇಗೆ ಬಜೆಟ್ ಮಂಡನೆ ಮಾಡುತ್ತಾರೆ ನೋಡೋಣ ಎಂದು ಬಿಜೆಪಿ ಮುಖಂಡ ಆರ್. ಅಶೋಕ್ ಹೇಳಿದರೆ ರಾಜ್ಯಪಾಲರ ಭಾಷಣಕ್ಕೆ ಅಡ್ಡಿ ಪಡಿಸಿದ್ದು ವಿಧಾನಸಭೆಗೆ ಕಪ್ಪು ಚುಕ್ಕೆ ಎಂದು ಜೆಡಿಎಸ್ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *