ಪತಿಯ ಅಭಿವೃದ್ಧಿ ಕೆಲ್ಸದಿಂದ ಗೆದ್ದಿದ್ದೇನೆ: ಪ್ರತಾಪ್ ಸಿಂಹಗೆ ಗೀತಾ ಮಹಾದೇವ್‍ಪ್ರಸಾದ್ ಟಾಂಗ್

Public TV
1 Min Read

ಗುಂಡ್ಲುಪೇಟೆ: ಮಹಾದೇವ ಪ್ರಸಾದ್ ಅವರ ಅಭಿವೃದ್ಧಿ ಕೆಲಸಗಳಿಂದಾಗಿ ನಾನು ಜಯಗಳಿಸಿದ್ದೇನೆ ಎಂದು ಗುಂಡ್ಲುಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ ಪ್ರಸಾದ್ ಹೇಳಿದ್ದಾರೆ.

ನಾನು ಗೆಲುವನ್ನು ನಿರೀಕ್ಷೆ ಮಾಡಿದ್ದೆ. ನಿರೀಕ್ಷೆಯಂತೆ ಜಯಗಳಿಸಿದ್ದೇನೆ. ಸಂಸದ ಪ್ರತಾಪ್ ಸಿಂಹ ಅವರು ಚುನಾವಣಾ ಪ್ರಚಾರದ ಸಮಯದಲ್ಲಿ ನನ್ನ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಯು ಸಹ ನನ್ನ ಜಯಕ್ಕೆ ಕಾರಣ ಎಂದು ತಿಳಿಸಿದರು.

ಪ್ರತಾಪ್ ಸಿಂಹ ಅವರು ಒಬ್ಬ ಮಹಿಳೆಯ ಬಗ್ಗೆ ಈ ರೀತಿಯಾಗಿ ಮಾತಾಡಿದರೆ ಯಾರೂ ಕ್ಷಮಿಸುವುದಿಲ್ಲ. ಕೇವಲ ಮಹಿಳೆಯರಷ್ಟೇ ಅಲ್ಲದೇ ಪುರಷರು ಸಹ ಇದನ್ನು ಖಂಡಿಸುತ್ತಾರೆ. ಪ್ರತಾಪ್ ಸಿಂಹ ಅವರಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳುವ ಮೂಲಕ ಸಂಸದರಿಗೆ ಟಾಂಗ್ ನೀಡಿದರು.

ಜನರು ನನ್ನ ಮೇಲೆ ನಂಬಿಕೆಯಿಟ್ಟು, ಗಲ್ಲಿಸಿದ್ದಾರೆ. ಮುಂದೆ ನಾನು ಮಹಾದೇವ ಪ್ರಸಾದ್ ಅವರ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸುತ್ತೇನೆ. ಪ್ರತಾಪ್ ಸಿಂಹ ತಮ್ಮ ಹೇಳಿಕೆಯಿಂದ ಸುಮಾರು 40 ಸಾವಿರ ಮತಗಳನ್ನು ಕಳೆದುಕೊಂಡಿದ್ದಾರೆ. ಜಯದ ಸಮಯದಲ್ಲಿ ಪ್ರತಾಪ್ ಸಿಂಹ ಅವರನ್ನು ಕ್ಷಮಿಸುತ್ತೇನೆ. ತಮ್ಮ ವಿವಾದಾತ್ಮಕ ಹೇಳಿಕೆ ನಂತ್ರ ನನ್ನ ಮಗನಿಗೆ ಫೋನ್ ಮಾಡಿ ಕ್ಷಮೆ ಕೇಳಿದ್ದರು. ಇಂದು ನಿಮ್ಮ ಮಾಧ್ಯಮಗಳ ಮುಖಾಂತರ ಅವರನ್ನು ಕ್ಷಮಿಸಿದ್ದೇನೆ ಎಂದು ತಿಳಿಸುತ್ತೇನೆ ಎಂದು ಹೇಳಿದರು.

ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳು, ಸಚಿವರು, ಶಾಸಕರಿಗೂ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕ್ಷೇತ್ರದ ಎಲ್ಲ ಮಹಿಳೆಯರಿಗೆ, ಮತದಾರರಿಗೆ ಮತ್ತು ಕಾರ್ಯಕರ್ತರಿಗೂ ಗೀತಾ ಮಹಾದೇವಪ್ರಸಾದ್ ಧನ್ಯವಾದ ಸಲ್ಲಿಸಿದರು.

 

 

Share This Article
Leave a Comment

Leave a Reply

Your email address will not be published. Required fields are marked *