ಕುತೂಹಲ ಮೂಡಿಸಿದ ರಾಜ್ಯ ಸಚಿವ ಸಂಪುಟ ಸರ್ಕಸ್ – ಸೋಮವಾರ ಬೊಮ್ಮಾಯಿ ನಡಿಗೆ ವರಿಷ್ಠರೆಡೆಗೆ

Public TV
1 Min Read

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸರ್ಕಸ್ ಮತ್ತಷ್ಟು ಕುತೂಹಲ ಮೂಡಿಸಿದೆ. ನಾಳೆ ಬೆಳಗ್ಗೆ 7 ಗಂಟೆಗೆ ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಯಾಣ ಬೆಳೆಸಲಿದ್ದಾರೆ.

ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಈ ವೇಳೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಪ್ರಸ್ತಾಪಿಸಲಿದ್ದಾರೆ ಎನ್ನಲಾಗುತ್ತಿದೆ. ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಬೇಟಿಗೆ ಅವಕಾಶ ಸಿಕ್ಕರೆ ಚರ್ಚೆ ನಡೆಸುತ್ತೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ನಿಧನ- ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ರದ್ದುಪಡಿಸಿದ ಬಿಜೆಪಿ

ಇತ್ತ ಸಚಿವಾಕಾಂಕ್ಷಿಗಳ ಲಾಬಿ ಮುಂದುವರಿದಿದೆ. ಸಚಿವ ಸ್ಥಾನ ಮೇಲೆ ನನಗೆ ಆಸೆ ಇಲ್ಲ. ಆದರೆ 13 ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಪರೋಕ್ಷವಾಗಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಆಸೆ ಹೊರಹಾಕಿದ್ರು. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನದ ಬಗ್ಗೆ ಕೇಂದ್ರ ವರಿಷ್ಠರು ನಿರ್ಣಯ ಮಾಡುತ್ತಾರೆ ಎಂದರು. ಇತ್ತ ಸಿಡಿ ಕೇಸ್‍ನಲ್ಲಿ ಕ್ಲೀನ್ ಚಿಟ್ ಪಡೆದ ರಮೇಶ್ ಜಾರಕಿಹೊಳಿ ಬಿಜೆಪಿ ಪ್ರಬಲ ನಾಯಕರ ಮೂಲಕ ವರಿಷ್ಠರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗುತ್ತಿದ್ದು, ನಾಳೆ ದೆಹಲಿಗೂ ಕೂಡ ತೆರಳಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪಂಚಭೂತಗಳಲ್ಲಿ ಸಂಗೀತ ಸಾಮ್ರಾಜ್ಞೆ ಲತಾ ಮಂಗೇಶ್ಕರ್ ಲೀನ

Share This Article
Leave a Comment

Leave a Reply

Your email address will not be published. Required fields are marked *