ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ – 5 ಕ್ಷೇತ್ರಗಳಲ್ಲಿ ಕ್ಲೀನ್ ಸ್ವಿಪ್

Public TV
1 Min Read

ಬಳ್ಳಾರಿ: ಜಿಲ್ಲೆಯಲ್ಲಿ ಕಾಂಗ್ರೆಸ್ (Congress) ಜಯಭೇರಿ ಭಾರಿಸಿದ್ದು 5 ಕ್ಷೇತ್ರಗಳಲ್ಲಿ ಕ್ಲೀನ್ ಸ್ವಿಪ್ ಮಾಡಿ ಸಾಧನೆ ಮಾಡಿದೆ.

ಬಳ್ಳಾರಿ ನಗರ: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭರತ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ ಸೋಮಶೇಖರ್ ರೆಡ್ಡಿ ಹಾಗೂ ಕೆಆರ್‌ಪಿಪಿಯಿಂದ ಸ್ಪರ್ಧಿಸಿದ್ದ ಅರುಣಾ ಲಕ್ಷ್ಮಿ ಸೋಲುಂಡಿದ್ದಾರೆ.

ಬಳ್ಳಾರಿ ಗ್ರಾಮೀಣ: ಕಾಂಗ್ರೆಸ್ ಅಭ್ಯರ್ಥಿ ಬಿ ನಾಗೇಂದ್ರ ಗೆದ್ದಿದ್ದು, ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಹೀನಾಯವಾಗಿ ಸೋತಿದ್ದಾರೆ.

ಸಂಡೂರು: ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತುಕರಾಂ ಗೆದ್ದಿದ್ದಾರೆ. ಅವರ ವಿರುದ್ಧ ಬಿಜೆಪಿಯ ಶಿಲ್ಪಾ ರಾಘವೇಂದ್ರ ಹಾಗೂ ಕೆಆರ್‌ಪಿಪಿಯ ಕೆಎಸ್ ದಿವಾಕರ್ ಸೋತಿದ್ದಾರೆ. ಇದನ್ನೂ ಓದಿ: ಗದಗ್‌ನಲ್ಲಿ ಈ ಬಾರಿ ಪಾಟೀಲರದ್ದೇ ಪಾರುಪತ್ಯ – ಬಿಜೆಪಿ, ಕಾಂಗ್ರೆಸ್ ಸಮಪಾಲು

ಕಂಪ್ಲಿ: ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆಎನ್ ಗಣೇಶ್ ಭರ್ಜರಿ ಗೆಲುವು ಕಂಡಿದ್ದಾರೆ. ಬಿಜೆಪಿಯಿಂದ ಸುರೇಶ್ ಬಾಬು ಸ್ಪರ್ಧಿಸಿ ಸೋತಿದ್ದಾರೆ.

ಸಿರಗುಪ್ಪಾ: ಕಾಂಗ್ರೆಸ್ ಅಭ್ಯರ್ಥಿ ಬಿಎಮ್ ನಾಗರಾಜ್ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಎಸ್ ಸೋಮಲಿಂಗಪ್ಪ ಹಾಗೂ ಕೆಆರ್‌ಪಿಪಿಯ ಧರಪ್ಪಾ ನಾಯಕ್ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋತಿದ್ದಾರೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 136, ಬಿಜೆಪಿ 65, ಜೆಡಿಎಸ್‌ 19 ಮುನ್ನಡೆ LIVE Updates

Share This Article