ಯೋಗಿಯಿಂದಲೇ ರಾಮ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಬಿಜೆಪಿ ಪ್ಲಾನ್‌

Public TV
1 Min Read

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರ ಮೂಲಕ ರಾಮ ಮಂದಿರ (Ram Temple) ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ರಾಜ್ಯ ಬಿಜೆಪಿ ಮುಂದಾಗಿದೆ.

ಹಳೆ ಮೈಸೂರು ಭಾಗದಲ್ಲಿ ಭರ್ಜರಿ ಮತ ಫಸಲು ತೆಗೆಯಲು ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಘೋಷಣೆಯನ್ನು ಬಜೆಟ್ (Budget) ಮೂಲಕ ಮಾಡಿದೆ. ಇದನ್ನು ಇಷ್ಟಕ್ಕೆ ಸೀಮಿತಗೊಳಿಸದೇ, ಚುನಾವಣಾ ನೀತಿಸಂಹಿತೆ ಘೋಷಣೆಗೆ ಮುನ್ನವೇ ಗುದ್ದಲಿ ಪೂಜೆಗೆ ಬಿಜೆಪಿ ಮುಂದಾಗಿದೆ. ಇದನ್ನೂ ಓದಿ: 42.63 ಕೋಟಿ ಆಸ್ತಿ ತೆರಿಗೆ ಬಾಕಿ – ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ತಂಡ ದಾಳಿ

ಮಾರ್ಚ್ ಮೊದಲ ವಾರದಲ್ಲಿ ಹಿಂದೂತ್ವ ಫೈರ್ ಬ್ರ್ಯಾಂಡ್‌, ಯುಪಿ ಸಿಎಂ ಯೋಗಿ ಆದಿತ್ಯನಾಥರನ್ನು ಕರೆಯಿಸಿ ಅವರ ಮೂಲಕವೇ ರಾಮಮಂದಿರಕ್ಕೆ ಅಡಿಗಲ್ಲು ಹಾಕಿಸಲು ಕೇಸರಿ ಪಡೆ ಪ್ಲಾನ್ ಮಾಡಿದ್ದು ಈ ಬೆಳವಣಿಗೆ ವಿಪಕ್ಷಗಳನ್ನು ಚಿಂತೆಗೀಡು ಮಾಡಿದಂತೆ ಕಾಣುತ್ತಿದೆ. ಇದನ್ನೂ ಓದಿ: 42.63 ಕೋಟಿ ಆಸ್ತಿ ತೆರಿಗೆ ಬಾಕಿ – ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ತಂಡ ದಾಳಿ.

ರಾಮ ಮಂದಿರ ವಿಚಾರ ಮುಂದಿನ ದಿನಗಳಲ್ಲಿ ರಾಮನಗರ ಹಾಗೂ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬೆಳವಣಿಗೆಗೆ ಪೂರಕವಾಗಬಹುದು ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *