ಮೋದಿ ಸಮಾವೇಶಕ್ಕೆ ಜನ ಸೇರಿಸಲು ಹಣ ಹಂಚಿಕೆ ಆರೋಪ – ಪಿ.ರಾಜೀವ್ ವಿರುದ್ದ ಎಫ್‌ಐಆರ್

Public TV
1 Min Read

ಚಿಕ್ಕೋಡಿ: ಕುಡಚಿ (Kudachi) ಮತಕ್ಷೇತ್ರದಲ್ಲಿ ಏಪ್ರಿಲ್ 29ರಂದು ನಡೆದ ಬಿಜೆಪಿ (BJP) ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿ ಆಮಿಷ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ (P.Rajeev) ಸೇರಿದಂತೆ ಇಬ್ಬರ ವಿರುದ್ಧ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿದೆ.

ಪ್ರಧಾನಮಂತ್ರಿಗಳು ಭಾಗವಹಿಸಿದ್ದ ಬಿಜೆಪಿ ಪಕ್ಷದ ಬಹಿರಂಗ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಉದ್ಧೇಶದಿಂದ ಮುಗಳಖೋಡ ಪಟ್ಟಣದ ಬಳಿ ಏಪ್ರಿಲ್ 29ರಂದು ಹಣ ಹಂಚಿಕೆ ಮಾಡಿ ಆಮಿಷ ತೋರಿಸಲಾಗಿದೆ ಎನ್ನುವ ವಿಡಿಯೋ ಆಧರಿಸಿ ದೂರು ನೀಡಲಾಗಿದೆ. ಇದನ್ನೂ ಓದಿ: ನಮ್ಮ ಜೊತೆ ಮೋದಿ ಇದ್ದಾರೆ, ಕಾಂಗ್ರೆಸ್ ಜೊತೆ ಭ್ರಷ್ಟರಿದ್ದಾರೆ: ಆರ್.ಅಶೋಕ್

ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಹಾಗೂ ಮುಗಳಖೋಡದ ಹಾಲಪ್ಪ ಹನಮಂತ ಶೇಗುಣಸಿ ಎಂಬವರ ವಿರುದ್ಧ ಸರಕಾರಿ ಅಧಿಕಾರಿ ಅಭಿಷೇಕ್ ಪಾಂಡೆ, ಹಾರೂಗೇರಿ (Harugeri) ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ನೀಡಿದ್ದಾರೆ. ಇದನ್ನೂ ಓದಿ: ಕಾಲಿಗೆ ಬೀಳಲು ಬಂದ ನಾಯಕರಿಗೆ ಬುದ್ಧಿ ಹೇಳಿದ ಮೋದಿ

Share This Article