ಬೆಳಗಾವಿ: ಎರಡನೇ ಹಂತದ ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ 10 ಅಭ್ಯರ್ಥಿಗಳ ನೇಮಕ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದರು.
ಬೈಲಹೊಂಗಲ ತಾಲೂಕಿನ ತಡಸಲೂರು ಗ್ರಾಮದಲ್ಲಿ ಮಾತನಾಡಿದ ಅವರು, ಸಮರ್ಥವಾದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತೇನೆ. 1994ರಲ್ಲಿ ಜಿಲ್ಲೆಯಲ್ಲಿ ಜನತಾ ದಳಕ್ಕೆ ಆಶೀರ್ವಾದ ಮಾಡಿದ್ದರು. ಸ್ವತಂತ್ರ ಸರ್ಕಾರದ ಗುರಿ ಇಟ್ಟುಕೊಂಡು ಹೊರಟಿದ್ದೇನೆ. ಅದರಲ್ಲಿ ಯಶಸ್ವಿಯಾಗುವ ಭರವಸೆ ಇದೆ. ಜಿಲ್ಲೆಯಲ್ಲಿ ಯಾವ ದೊಡ್ಡ ನಾಯಕರು ಬರುತ್ತಾರೆ ಎನ್ನುವುದು ಶೀಘ್ರದಲ್ಲೇ ಗೊತ್ತಾಗಲಿದೆ ಎಂದರು.
ಕೋಲಾರದಲ್ಲೂ ದಲಿತ ಸಿಎಂ ಅಭಿಯಾನ ವಿಚಾರಕ್ಕೆ ಪ್ರತಿಕ್ರಿಯಿಸಿ ಕಾಂಗ್ರೆಸ್ (Congress) ನಾಯಕರೇ ಮಾಡುತ್ತಿರಬೇಕು, ನೋಡೋಣ. ದಲಿತ ಸಿಎಂ ಆಗಬಾರದು ಎಂಬುದು ಎಲ್ಲಿಯೂ ಇಲ್ಲ. ಯಾವುದೇ ಸಮಾಜದವರು ಸಿಎಂ ಆಗಲು ಸಂವಿಧಾನದಲ್ಲಿ ಹಕ್ಕು ಇದೆ. ಶಾಸಕರ ಬೆಂಬಲದ ಸಂಖ್ಯೆಗೆ ಅನುಗುಣವಾಗಿ ಸಿಎಂ ಆಗಬಹುದು ಎಂದು ಹೇಳಿದರು.
ಚನ್ನಪಟ್ಟಣದಲ್ಲಿ ನಟಿ ರಮ್ಯಾ (Ramya) ಸ್ಪರ್ಧೆ ಮಾಡ್ತಾರೆ ಎನ್ನುವ ವದಂತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾರು ಬೇಕಾದರೂ ಸ್ಪರ್ಧೆ ಮಾಡಲಿ. ಇದು ಆಯಾ ಪಕ್ಷಕ್ಕೆ ಬಿಟ್ಟ ವಿಚಾರವಾಗಿದೆ. ಅದರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ. ನನ್ನ ಕೆಲಸ ನಾನು ಮಾಡುತ್ತೇನೆ, ಈಗಲೂ ರಾಮನಗರ, ಚನ್ನಪಟ್ಟಣದಲ್ಲಿ ಜೆಡಿಎಸ್ ಬಗ್ಗೆ ಜನರಲ್ಲಿ ವಿಶ್ವಾಸವಿದೆ. ಈ ಸಲ ನನ್ನ ವಿರುದ್ಧ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಇಲ್ಲ. ಜನರಿಗೆ ನನ್ನ ಮೇಲೆ ವಿಶ್ವಾಸ ಇದೆ. ಚನ್ನಪಟ್ಟಣದಲ್ಲಿ ಮನೆ ಮಗನಿಂತ ಹೆಚ್ಚಾಗಿ ಪ್ರಿತಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಗನ ಗೆಲುವಿಗಾಗಿ ಜೆಡಿಎಸ್ (JDS) ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರಾರ್ಥನೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಮಗ ಚುನಾವಣೆ ನಿಂತಾಗ ಗೆಲ್ಲಬೇಕು ಎನ್ನುವುದು ಎಲ್ಲ ಕುಟುಂಬದಲ್ಲಿ ಇರುತ್ತದೆ. ಇದರ ಬಗ್ಗೆ ಹೆಚ್ಚಿನ ಚರ್ಚೆ ಮಾಡೋದು ಅನಗತ್ಯ ಎಂದರು. ಇದನ್ನೂ ಓದಿ: ಚರ್ಚ್ಗೆ ಬೆಂಕಿ ಹಾಕಿ, ಗೊಡೆ ಮೇಲೆ ರಾಮ ಎಂದು ಬರೆದ ಕಿಡಿಗೇಡಿಗಳು
ಇಡೀ ರಾಜ್ಯದಲ್ಲಿ ಪಂಚರತ್ನ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದೇ ರೀತಿಯ ವಾತಾವರಣ ಇಂದು (ಸೋಮವಾರ) ಬೆಳಗಾವಿ ಜಿಲ್ಲೆಯಲ್ಲಿ ನಿರ್ಮಾಣ ಆಗಿದೆ. ಸಾಲ ಮನ್ನಾದಿಂದ ಬೆಳಗಾವಿ ಜಿಲ್ಲೆಗೆ ಅತಿ ಹೆಚ್ಚು ಲಾಭ ಸಿಕ್ಕಿದೆ. ರಾಜ್ಯದಲ್ಲಿ ಮೂರು ಸಾವಿರ ಕೋಟಿ ರೂ. ಉಪಯೋಗಕ್ಕೆ ಬಂದಿದೆ. ಪ್ರತಿಯೊಂದರಲ್ಲೂ ಅನಕೂಲ ಮಾಡಿದ್ದೀಯಾ ನಿನ್ನ ಋಣ ತೀರಿಸುತ್ತೇವೆ ಎಂದು ಜನ ಹೇಳುತ್ತಿದ್ದಾರೆ. ಪಂಚರತ್ನ ಯೋಜನೆಯ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಖ್ಯ ಶಿಕ್ಷಕಿಯನ್ನೇ ಕೂಡಿಹಾಕಿದ ವಿದ್ಯಾರ್ಥಿನಿಯರು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k