ಬೆಂಗಳೂರು: ರಾಜ್ಯ ರಾಜಕಾರಣದ ಕಳೆದ ಬಾರಿಯಂತೆ ಈ ಬಾರಿಯೂ ಟಾರ್ಗೆಟ್ ಸಿದ್ದರಾಮಯ್ಯ (Siddaramaiah) ಫಿಕ್ಸ್ ಆಗುವ ಲಕ್ಷಣಗಳು ಕಾಣುತ್ತಿವೆ. ಬಿಜೆಪಿ, ಜೆಡಿಎಸ್ ಎಲ್ಲರಿಗೂ ಟಾರ್ಗೆಟ್ ಸಿದ್ದರಾಮಯ್ಯ ಒನ್ ಲೈನ್ ಅಜೆಂಡಾ ಎನ್ನಲಾಗುತ್ತಿದೆ.
ಹಿಂದಿನಂತೆ ಈ ಬಾರಿಯು ಸಿದ್ದರಾಮಯ್ಯಗೆ ಏಕಾಂಗಿ ಹೋರಾಟ ಅನಿವಾರ್ಯವಾಗುತ್ತಾ ಎಂಬ ಮಾತುಗಳು ಕೇಳಿ ಬರುತ್ತಿವೆ. ಟಾರ್ಗೆಟ್ ಸಿದ್ದರಾಮಯ್ಯ ಗುರಿ ಇಟ್ಟುಕೊಂಡೇ ಎದುರಾಳಿಗಳು ದಾಳ ಉರುಳಿಸಲು ಮುಂದಾಗಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ (Congress) ವಿರುದ್ಧ ದಾಳ ಉರುಳಿಸಲು ಎದುರಾಳಿಗಳು ಮುಂದಾದಂತಿದೆ.
2018ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಮತ್ತು ಬಾದಾಮಿಯಲ್ಲಿ ಸ್ಪರ್ಧಿಸಿದ್ದರು. ಈ ವೇಳೆ ಜೆಡಿಎಸ್ ಹಾಗೂ ಬಿಜೆಪಿ ಸಿದ್ದರಾಮಯ್ಯರನ್ನೇ ಟಾರ್ಗೆಟ್ ಮಾಡಿತ್ತು. ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ಬಳಿಕ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ನಾಯಕರು ಈ ಬಾರಿಯೂ ಸಿದ್ದರಾಮಯ್ಯ ಅವರನ್ನೇ ಟಾರ್ಗೆಟ್ ಮಾಡಿ ಮಾತನಾಡಲು ಆರಂಭಿಸಿದ್ದಾರೆ. ಈ ಬೆಳವಣಿಗೆ ನೋಡಿದರೆ ಈ ಬಾರಿಯೂ ಟಾರ್ಗೆಟ್ ಸಿದ್ದರಾಮಯ್ಯ ಅಸ್ತ್ರ ಜೋರಾಗಿ ಬಳಕೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಮಾಧುಸ್ವಾಮಿ ಮೊದಲು ಮಾತಾಡಲಿ- ಸಚಿವರ ಹೇಳಿಕೆಗೆ ಸಿಎಂ ವ್ಯಂಗ್ಯ
ಕಳೆದ ಬಾರಿ ಏನಾಗಿತ್ತು?
ವರುಣಾ ಕ್ಷೇತ್ರವನ್ನು ಯತೀಂದ್ರ ಅವರಿಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಮತ್ತು ಬಾದಾಮಿಯಲ್ಲಿ ಸ್ಪರ್ಧಿಸಿದ್ದರು. ಚಾಮುಂಡೇಶ್ವರಿಯಲ್ಲಿ ಜಿಟಿ ದೇವೇಗೌಡ 36 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರೆ ಬಾದಾಮಿಯಲ್ಲಿ ಶ್ರೀರಾಮುಲು ಭಾರೀ ಸ್ಪರ್ಧೆ ನೀಡಿದ್ದರೂ ಸಿದ್ದರಾಮಯ್ಯ ಕೇವಲ 1,696 ಮತಗಳ ಅಂತರದಿಂದ ಜಯಗಳಿಸಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k