ವಿಶೇಷ ಚೇತನನಿಂದ ಮತದಾನ – ಕಾಲು ಬೆರಳಿಗೆ ಶಾಯಿ ಹಾಕಿದ ಅಧಿಕಾರಿಗಳು

Public TV
1 Min Read

ಬಳ್ಳಾರಿ: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Election) ಹಿನ್ನೆಲೆಯಲ್ಲಿ ಎರಡು ಕೈ ಇಲ್ಲದ ವಿಶೇಷ ಚೇತನನೊಬ್ಬರು ಬಳ್ಳಾರಿಯಲ್ಲಿ (Ballary) ಮತದಾನ ಚಲಾಯಿಸಿದರು.

ಬಳ್ಳಾರಿ ಗ್ರಾಮೀಣ ಕ್ಷೇತ್ರದ  ಕೊಳಗಲ್ಲು ಗ್ರಾಮದ ಮುಸ್ತಫಾ ಅವರಿಗೆ ಕೈಗಳೆರಡು ಇಲ್ಲ. ಆದರೂ ಅತ್ಯಂತ ಹುರುಪಿನಿಂದ ಮತಗಟ್ಟೆಗೆ ಬಂದ ಮುಸ್ತಫಾ ಅವರು ತಮ್ಮ ಹಕ್ಕನ್ನು ಚಲಾಯಿಸಿದರು. ಈ ಮೂಲಕ ಉಳಿದವರಿಗೂ ಮಾದರಿಯಾದರು. ಈ ವೇಳೆ ಚುನಾವಣಾ ಅಧಿಕಾರಿಗಳು ಮುಸ್ತಫಾಗೆ ಎರಡೂ ಕೈ ಇಲ್ಲದ ಕಾರಣ ಕಾಲು ಬೆರಳಿಗೆ ಮತದಾನದ ಶಾಹಿ ಹಾಕಿದರು. ವಿಶೇಷ ಚೇತನ ಎಂ.ಡಿ ಮುಸ್ತಫಾ ಅವರು ಮತದಾನ ಮಾಡಿದರು. ಇದನ್ನೂ ಓದಿ: ರಾಮನಗರ, ಉಡುಪಿಯಲ್ಲಿ ಭರ್ಜರಿ ಮತದಾನ – ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ನೀರಸ ಪ್ರತಿಕ್ರಿಯೆ

ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಕರ್ನಾಟಕ ಚುನಾವಣೆ ಇಂದು ಬೀರುಸಿನಿಂದ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

Share This Article