ಹಾವೇರಿ: ಕಾಂಗ್ರೆಸ್ (Congress) ಮೂರನೇ ಪಟ್ಟಿ ಬಿಡುಗಡೆಯಾಗಿದ್ದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದು ಇನ್ನೂ ನಿಗೂಢವಾಗಿದೆ.
ಆರಂಭದಲ್ಲಿ ಶಿಗ್ಗಾವಿಯಲ್ಲಿ ವಿನಯ್ ಕುಲಕರ್ಣಿ ಅವರನ್ನು ಕಣಕ್ಕೆ ಇಳಿಸಲಾಗುತ್ತದೆ ಎಂಬ ಸುದ್ದಿ ಬಂದಿತ್ತು. ಆದರೆ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಗ್ರಾಮೀಣ ಕ್ಷೇತ್ರ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ 3ನೇ ಪಟ್ಟಿ ರಿಲೀಸ್ – ಸಿದ್ದರಾಮಯ್ಯ ಕೋಲಾರದಿಂದ ಔಟ್, ಉಮಾಶ್ರೀಗೂ ಕೊಕ್
ಶಿಗ್ಗಾವಿಯಲ್ಲಿ ಕಾಂಗ್ರೆಸ್ ನಾಯಕರ ಮಧ್ಯೆ ಅಸಮಾಧಾನವಿದ್ದು ಈ ಅಸಮಾಧಾನವನ್ನು ಶಮನ ಮಾಡಲು ಕಾಂಗ್ರೆಸ್ ಈಗ ಮುಂದಾಗಿದೆ.
ಪಂಚಮಸಾಲಿ ಅಥವಾ ಮುಸ್ಲಿಮ್ ಸಮುದಾಯದ ಪೈಕಿ ಯಾರನ್ನು ಕಣಕ್ಕೆ ಇಳಿಸಬೇಕು ಎಂಬುದರ ಬಗ್ಗೆ ಕೈ ನಾಯಕರ ಮಧ್ಯೆ ಭಾರೀ ಚರ್ಚೆಯಾಗುತ್ತಿದೆ. ಹೀಗಾಗಿ ನಾಲ್ಕನೇ ಪಟ್ಟಿಯಲ್ಲಿ ಶಿಗ್ಗಾವಿ ಕ್ಷೇತ್ರದ ಅಭ್ಯರ್ಥಿ ಪ್ರಕಟವಾಗುವ ಸಾಧ್ಯತೆಯಿದೆ.