ಸಿಂಗಾಪುರ್ ಪಾಲಿಟಿಕ್ಸ್ ಅಸಲಿ ಆಟ ಶುರುನಾ?

Public TV
1 Min Read

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಯ ಎಕ್ಸಿಟ್ ಪೋಲ್‍ (Exit Poll) ನಲ್ಲಿ ಅತಂತ್ರ ಫಲಿತಾಂಶ ಸುಳಿವು ಸಿಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ (HD Kumaraswamy) ಯವರು ವಿಶ್ರಾಂತಿ ನೆಪದಲ್ಲಿ ಸಿಂಗಾಪುರಕ್ಕೆ ಹಾರಿರುವುದು ಇದೀಗ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.

ಹೌದು. ಕುಮಾರಸ್ವಾಮಿಯವರು ಸುಮ್ಮನೆ ಕುಳಿತುಕೊಳ್ಳುವ ನಾಯಕರಲ್ಲ. ಹೀಗಾಗಿ ಸಿಂಗಾಪುರ್ ಪಾಲಿಟಿಕ್ಸ್ (Singapore Politics) ಅಸಲಿ ಆಟ ಶುರುನಾ ಎಂಬ ಪ್ರಶ್ನೆ ಮೂಡಿದ್ದು, ಸರ್ಕಾರದ ಮ್ಯಾಜಿಕ್ ಗೇಮ್ ಪ್ಲ್ಯಾನ್ ಏನು ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಎಕ್ಸಿಟ್ ಪೋಲ್ ನಂಬಿದ ಕಾಂಗ್ರೆಸ್‍ನಲ್ಲಿ ನಾನಾ ಲೆಕ್ಕಾಚಾರ- ಸಿಎಂ ಆಗುವ ಕನಸಲ್ಲಿ ಸಿದ್ದು, ಡಿಕೆ

ಕುಮಾರಸ್ವಾಮಿ ಲೆಕ್ಕಾಚಾರ ಏನು?: ಯಾವುದೇ ಪಕ್ಷಕ್ಕೆ ಬಹುಮತ ಬರಲ್ಲ ಅನ್ನೋದು ಸಮೀಕ್ಷೆಗಳಲ್ಲಿ ಸ್ಪಷ್ಟವಾಗಿದೆ. ಹೀಗಾಗಿ ಸಿಂಗಾಪುರ್‍ನಲ್ಲಿ ರಾಜಕೀಯದ ಆಟ ಆಡೋಕೆ ಹೆಚ್‍ಡಿಕೆ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಅತಂತ್ರ ಬಳಿಕ ಯಾರ ಜೊತೆ ಹೋಗಬೇಕು ಎಂಬ ಬಗ್ಗೆ ಲೆಕ್ಕಾಚಾರ ಶುರುವಾಗಿದ್ದು, ಕಾಂಗ್ರೆಸ್ (Congress)-ಬಿಜೆಪಿ (BJP) ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಒಟ್ಟಿನಲ್ಲಿ ಸಿಂಗಾಪುರ್ ನಲ್ಲಿ ವಿಶ್ರಾಂತಿ ನೆಪದಲ್ಲಿ ಸರ್ಕಾರ ರಚನೆ ಬಗ್ಗೆ ಪ್ಲ್ಯಾನ್ ನಡೆಸಲಾಗುತ್ತಿದೆ. ಕಾಂಗ್ರೆಸ್-ಬಿಜೆಪಿ ಜೊತೆ ಯಾರು ಒಳ್ಳೆಯವರು ಅನ್ನೋ ಲೆಕ್ಕಾಚಾರ ಮಾಡಲಾಗುತ್ತಿದ್ದು, ಫಲಿತಾಂಶ ಫೈನಲ್ ಆದ ಮೇಲೆ ಸಿಂಗಾಪುರ್ ಆಟದ ಅಸಲಿಯತ್ತು ಬಯಲಾಗಲಿದೆ.

Share This Article