ಮತ ಎಣಿಕೆ ಆರಂಭಕ್ಕೂ ಮುನ್ನ ನಾಡದೇವತೆ ಮೊರೆ ಹೋದ ಸೋಮಣ್ಣ

Public TV
1 Min Read

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ (Assembly Election Result) ಆರಂಭಕ್ಕೂ ಮುನ್ನ ಬೆಳ್ಳಂಬೆಳಗ್ಗೆ ಚಾಮರಾಜನಗರ (Chamarajanagar)  ಹಾಗೂ ವರುಣ (Varuna) ಕ್ಷೇತ್ರದ ಅಭ್ಯರ್ಥಿ ವಿ. ಸೋಮಣ್ಣ (V Somanna) ನಾಡದೇವತೆ ಮೊರೆ ಹೋಗಿದ್ದಾರೆ.

ಮೈಸೂರಿನ (Mysuru) ಚಾಮುಂಡಿ ಬೆಟ್ಟಕ್ಕೆ (Chamundi Hill) ಭೇಟಿ ನೀಡಿದ ಸೋಮಣ್ಣ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿಯ ಮೊದಲ ಪೂಜೆ ಕಾರ್ಯದಲ್ಲೇ ಸೋಮಣ್ಣ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಕಾಲಿಗೆ ಮೊಬೈಲ್‌ ಕಟ್ಟಿಕೊಂಡು, ಕೇಸರಿ ಶಾಲು ಹಾಕ್ಕೊಂಡು ಮತ ಎಣಿಕೆಗೆ ಬಂದಿದ್ದ ಏಜೆಂಟ್‌ ವಾಪಸ್‌

ವರುಣ ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದು, ಚಾಮರಾಜನಗರದ ಜೊತೆಗೆ ವರುಣ ಕ್ಷೇತ್ರವನ್ನೂ ಸೋಮಣ್ಣ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಇದೀಗ ಮತ ಎಣಿಕೆ ಪ್ರಕ್ರಿಯೆಗೂ ಮುನ್ನ ನಾಡದೇವತೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. ಇದನ್ನೂ ಓದಿ: Karnataka Election 2023 Result – ರಾಜ್ಯಾದ್ಯಂತ ಮತ ಎಣಿಕೆ ಆರಂಭ LIVE Updates

Share This Article