ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಬಿಜೆಪಿಗೆ ದೊಡ್ಡಪೆಟ್ಟು ಬಿದ್ದಿದೆ: ಎಂ.ಪಿ ರೇಣುಕಾಚಾರ್ಯ

Public TV
1 Min Read

ದಾವಣಗೆರೆ: ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ಗೊಂದಲದಿಂದ ಬಿಜೆಪಿಗೆ ದೊಡ್ಡಪೆಟ್ಟು ಬಿದಿದ್ದೆ ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ (MP Renukacharya) ತಿಳಿಸಿದರು.

ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದ್ದು, ಸೋಲೇ ಗೆಲುವಿನ ಮೆಟ್ಟಿಲು. ಕಾಂಗ್ರೆಸ್ (Congress Manifesto) ಹಸಿಸುಳ್ಳು ಹೇಳಿ, ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಯಾವ ರೀತಿ ಸರ್ಕಾರ ನಡೆಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ ಎಂದರು. ಇದನ್ನೂ ಓದಿ135 ಶಾಸಕರು ನಮ್ಮವರೇ, ಹೈಕಮಾಂಡ್ ಪಾದಕ್ಕೆ ಹಾಕಿದ್ದೀವಿ: ಡಿಕೆ ಶಿವಕುಮಾರ್

 

ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ಗೊಂದಲದಿಂದ ದೊಡ್ಡಪೆಟ್ಟು ಬಿದ್ದಿದೆ. ಉತ್ತಮ ಪ್ರಣಾಳಿಕೆ ನಮ್ಮದಿದ್ದರೂ ತಡವಾಗಿ ಬಿಡುಗಡೆ ಮಾಡಲಾಯಿತು. ಕಾಂಗ್ರೆಸ್‍ನವರು ಎರಡು ತಿಂಗಳು ಮುಂಚೆ ಪ್ರಣಾಳಿಕೆ ಬಿಡುಗಡೆ ಮಾಡಿ, ಗ್ಯಾರಂಟಿಗಳನ್ನು ನೀಡಿದರು. ಇದರಿಂದ ನಮಗೆ ಹಿನ್ನಡೆಯಾಯ್ತು. ಜೊತೆಗೆ ಎನ್‍ಪಿಎಸ್, ಓಪಿಎಸ್ ನೌಕರರಿಂದ ಹಿನ್ನೆಡೆಯಾಯ್ತು ಎಂದು ಹೇಳಿದರು.

ಹಿರಿಯ ಮುಖಂಡರಾದ ಯಡಿಯೂರಪ್ಪ (BS Yediyurappa), ಈಶ್ವರಪ್ಪ (KS Eshwarappa), ಜಗದೀಶ್ ಶೆಟ್ಟರ್ (Jagadeesh Shettar) ಅವರನ್ನು ಕಡೆಗಣಿಸಿದ್ದಾರೆಂದು ತಪ್ಪು ಸಂದೇಶ ರವಾನಿಸಿ ಅದನ್ನು ಮತಗಳಾಗಿ ಪರುವರ್ತನೆ ಮಾಡಿಕೊಂಡಿದ್ದಾರೆ. ಸೋಲಿನ ಬಗ್ಗೆ ಯಾರನ್ನೂ ದೂಷಿಸುವುದಿಲ್ಲ. ಅವಳಿ ತಾಲೂಕಿನ ಜನರು 75 ಸಾವಿರ ಮತ ಹಾಕಿದ್ದು, ನಾನು ಅವರಿಗೆ ಚಿರಋಣಿಯಾಗಿದ್ದೇನೆ. ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿಗೆಡುವುದು ಬೇಡ. ಇದನ್ನು ಸವಾಲಾಗಿ ಸ್ವೀಕರಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರೋಣ ಎಂದು ರೇಣುಕಾಚಾರ್ಯ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ರು.

Share This Article