ಮಂಡ್ಯದಲ್ಲಿ ಶುರುವಾಯ್ತು ಇನ್‍ವೈಟ್ ಪಾಲಿಟಿಕ್ಸ್- ಸುಮಲತಾ ಶ್ರೀರಂಗಪಟ್ಟಣದಿಂದ ಸ್ಫರ್ಧೆಗೆ ಆಹ್ವಾನ

Public TV
2 Min Read

ಮಂಡ್ಯ: ಜಿಲ್ಲೆಯಲ್ಲಿ ಚುನಾವಣೆ (Vidhanasabha Election) ಯ ಅಖಾಡ ಗರಿಗೆದರಿದೆ. ಆಪ್ತರುಗಳು ತಮ್ಮ ನಾಯಕರನ್ನು ತಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಆಹ್ವಾನಿಸಿದ್ದಾರೆ. ಇದೀಗ ಮಂಡ್ಯ ಜಿಲ್ಲೆಯ ನಾಯಕಿಯನ್ನು ಅವರ ಆಪ್ತರು ಪಕ್ಷಕ್ಕೆ ಆಹ್ವಾನ ಮಾಡುವುದರ ಜೊತೆಗೆ ಆ ಒಂದು ಕ್ಷೇತ್ರದಲ್ಲಿ ಸ್ಪರ್ಧೆಗೂ ಸಹ ಆಹ್ವಾನಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವು ಬಾಕಿ ಇದೆ. ಹೀಗಿದ್ದರೂ ಸಹ ರಾಜ್ಯದಲ್ಲಿ 3 ರಾಜಕೀಯ ಪಕ್ಷದವರು ಫುಲ್ ಆ್ಯಕ್ಟೀವ್ ಆಗಿ ಮತದಾರರನ್ನು ಸೆಳೆಯಲು ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗುತ್ತಿದ್ದಾರೆ. ಅದರಲ್ಲೂ ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ರಾಜಕೀಯ ಫುಲ್ ಆ್ಯಕ್ಟೀವ್. ಮುಖಂಡರು ತಮ್ಮ ನಾಯಕರಿಗೆ ತಮ್ಮ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಆಹ್ವಾನಿಸ್ತಿದ್ದಾರೆ.

ಆರಂಭದಲ್ಲಿ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಗುರುಚರಣ್ ಕೆಪಿಸಿಸಿ ಅಧ್ಯಕ್ಷ ಡಿಕೆಶಿ (DK Shivakumar) ಮದ್ದೂರು ಕ್ಷೇತ್ರ (Maddur Constituency) ದಿಂದ ಸ್ಪರ್ಧಿಸುವಂತೆ ಆಹ್ವಾನಿಸಿದರು. ಇದಾದ ನಂತರ ಮಂಡ್ಯ ಶಾಸಕ ಎಂ.ಶ್ರೀನಿವಾಸ್ ಅವರು ಹೆಚ್.ಡಿ.ಕುಮಾರಸ್ವಾಮಿ (H.D Kumaraswamy) ಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಆಹ್ವಾನಿಸಿದರು. ಇದೀಗ ಸಂಸದೆ ಸುಮಲತಾ ಅಂಬರೀಶ್ ಅವರ ಸರದಿ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಹಾಗೂ ಸುಮಲತಾ ಅಂಬರೀಶ್ (Sumalatha Ambareesh) ಆಪ್ತ ಇಂಡುವಾಳು ಸಚ್ಚಿದಾನಂದ ಬಿಜೆಪಿ ಪಕ್ಷಕ್ಕೆ ಆಹ್ವಾನಿಸಿದ್ದಾರೆ.

ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಪ್ರಮುಖ ಟ್ರಂಪ್ ಕಾರ್ಡ್ ಆಗಿರುವ ಇಂಡುವಾಳು ಸಚ್ಚಿದಾನಂದ ಅವರು ಕ್ಷೇತ್ರದ್ಯಾಂತ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯ್ತಿ ಹಳ್ಳಿಗಳಲ್ಲಿ ಕಾಲಿಗೆ ಚಕ್ರಕ್ಕೆ ಕಟ್ಟಿಕೊಂಡು ತಿರುಗುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಲು ಪ್ರಮುಖ ಕಾರಣ ಎಂದ್ರೆ ಇದೇ ಇಂಡುವಾಳು ಸಚ್ಚಿದಾನಂದ. ಇದನ್ನೂ ಓದಿ: 2 ಬಾರಿ ಆಪರೇಷನ್ ಆದ್ರೂ ಆರೋಗ್ಯ ಲೆಕ್ಕಿಸದೇ ಪಕ್ಷಕ್ಕಾಗಿ ಹೋರಾಟ: ರೇವಣ್ಣ ಭಾವುಕ

ಸುಮಲತಾ ಅಂಬರೀಶ್ ಆಪ್ತ ವಲಯದಲ್ಲಿ ಇರುವ ಸಚ್ಚಿದಾನಂದ ಕಳೆದ ಎರಡು ತಿಂಗಳ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ರು. ಇದೀಗ ಸಚ್ಚಿದಾನಂದ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿ ಪಕ್ಷಕ್ಕೆ ಆಹ್ವಾನ ಮಾಡಿದ್ದು, ಸುಮಲತಾ ಅವರು ಬಿಜೆಪಿಗೆ ಬಂದರೆ ಅನುಕೂಲವಾಗುತ್ತೆ ಎಂದು ಹೇಳಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರ (Srinrangapatna Contituency) ದಲ್ಲಿ ಸುಮಲತಾ ಅಂಬರೀಶ್ ಅವರು ಸ್ಪರ್ಧೆ ಮಾಡಿದ್ದರೆ ನಾನು ಸ್ವಾಗತ ಮಾಡುತ್ತೇನೆ ಎಂದು ಸಚ್ಚಿದಾನಂದ ಹೇಳಿದ್ದಾರೆ.

ಮಂಡ್ಯದಲ್ಲಿ ಆಹ್ವಾನ ಪಾಲಿಟಿಕ್ಸ್ ಜೋರಾಗಿದ್ದು, ಸುಮಲತಾ ಅಂಬರೀಶ್‍ಗೆ ಅವರ ಆಪ್ತ ಇಂಡುವಾಳು ಸಚ್ಚಿದಾನಂದ ಬಿಜೆಪಿಗೆ ಆಹ್ವಾನಿಸಿದ್ದು ಸುಮಲತಾ ಅಂಬರೀಶ್ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *