10 ನಿಮಿಷ ತಡವಾಗಿದ್ದಕ್ಕೆ ರಾಜ್ಯಪಾಲರ ಬಿಟ್ಟುಹೋದ ವಿಮಾನ – ಗೆಹ್ಲೋಟ್‌ ಗರಂ

Public TV
1 Min Read

ಬೆಂಗಳೂರು: ಹೈದರಾಬಾದ್‌ಗೆ (Hyderabad) ತೆರಳಬೇಕಿದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ (Thawarchand Gehlot) ಅವರು 10 ನಿಮಿಷ ತಡವಾಗಿ ಏರ್‌ಪೋರ್ಟ್‌ಗೆ (Bengaluru Airport) ಆಗಮಿಸಿದ್ದಕ್ಕೆ, ಅವರನ್ನೇ ವಿಮಾನ ಬಿಟ್ಟು ಹೋಗಿರುವ ಘಟನೆ ನಡೆದಿದೆ.

ಗುರುವಾರ ಮಧ್ಯಾಹ್ನ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಘಟನೆ ನಡೆದಿದ್ದು, ರಾಜ್ಯಪಾಲರು (Karnataka Governor) ಗರಂ ಆಗಿದ್ದಾರೆ. ನಾನು ರಾಜ್ಯದ ಪ್ರಥಮ ಪ್ರಜೆ. ನನಗೆ ಅಗೌರವ ಉಂಟಾಗಿದೆ. ನನ್ನ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ. 10 ನಿಮಿಷ ತಡವಾದರೆ, ಕಾಯಬೇಕಿತ್ತು. ಹಾಗಂಥ ನನ್ನ ಬಿಟ್ಟು ಹೋಗ್ತಾರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸ್ಪಂದಿಸುವುದು ನಿಮ್ಮ ಕರ್ತವ್ಯ, ಎಷ್ಟು ಸಾಧ್ಯವೋ ಅಷ್ಟು ಶಾಸಕರ ಕೆಲಸ ಮಾಡಿಕೊಡಿ: ಸಿದ್ದರಾಮಯ್ಯ

ಗೆಹ್ಲೋಟ್ ಅವರು ಕಾರ್ಯಕ್ರಮದ ನಿಮಿತ್ತ ಬೆಂಗಳೂರಿನಿಂದ ಹೈದರಾಬಾದ್‌ಗೆ ಹೊರಟ್ಟಿದ್ದರು. ಮಧ್ಯಾಹ್ನ 2 ಗಂಟೆಗೆ ಏರ್‌ಏಶಿಯಾ ವಿಮಾನದ ಮೂಲಕ ಹೋಗಬೇಕಿತ್ತು. ಆದರೆ 15 ನಿಮಿಷ ತಡವಾಗಿ ಏರ್‌ಪೋರ್ಟ್ ತಲುಪಿದ್ದಾರೆ.

ಅಷ್ಟರಲ್ಲಿ ವಿಮಾನ ರಾಜ್ಯಪಾಲರ ಬಿಟ್ಟು ಹಾರಾಟ ನಡೆಸಿತ್ತು. ಇದರಿಂದ ಕೋಪಗೊಂಡ ರಾಜ್ಯಪಾಲರು ಅಧಿಕಾರಗಳ ಕರೆಸಿ ಮಾತನಾಡಿದ್ದಾರೆ. ಅಲ್ಲದೇ ಶಿಷ್ಟಾಚಾರ ಉಲ್ಲಂಘನೆ ಮಾಡಿದ ವಿಮಾನ ಕಂಪನಿಯ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬ್ಲಾಸ್ಟ್ ಪ್ರಕರಣ – ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ

ಇಷ್ಟೆಲ್ಲಾ ಆದ ಬಳಿಕ 3:30 ರ ವಿಮಾನದಲ್ಲಿ ಹೈದರಾಬಾದ್‌ ತಲುಪಿದ್ದಾರೆ. ಈ ಬೆಳವಣಿಗೆಯಿಂದ ರಾಜ್ಯಪಾಲರು ಕಾರ್ಯಕ್ರಮದಲ್ಲಿ ತಡವಾಗಿ ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ‌.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್