ಮೀಸಲಾತಿ ಪ್ರಮಾಣ ಹೆಚ್ಚಳ ದಿಟ್ಟ ನಿರ್ಧಾರ: ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರವು ಎಸ್‌ಸಿ(SC), ಎಸ್‌ಟಿ(ST) ಮೀಸಲಾತಿ(Reservation) ಪ್ರಮಾಣ ಹೆಚ್ಚಿಸಿರುವುದು ದಿಟ್ಟ ನಿರ್ಧಾರ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ತಿಳಿಸಿದರು.

ಎಸ್‌ಸಿ, ಎಸ್‌ಟಿ ಮೀಸಲಾತಿ ಸಂಬಂಧ ರಾಜ್ಯ ಬಿಜೆಪಿ ಸರಕಾರದ ನಿರ್ಧಾರವನ್ನು ಸ್ವಾಗತಿಸಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಏರ್ಪಡಿಸಿದ ಸಂಭ್ರಮಾಚರಣೆ ಸಂದರ್ಭದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: SC-ST ಮೀಸಲಾತಿ ಹೆಚ್ಚಳಕ್ಕೆ ಒಪ್ಪಿಗೆ – ಹಾಲಿ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

ಸರ್ವಸ್ಪರ್ಶಿ ಸರ್ವವ್ಯಾಪಿ ಎಂಬಂತೆ ಬಸವರಾಜ ಬೊಮ್ಮಾಯಿ(Basavaraj Bommai) ಮತ್ತು ಅವರ ಸಂಪುಟವು ಈ ನಿರ್ಧಾರ ಮಾಡಿದೆ. ಈ ನಿರ್ಧಾರ ಮಾಡಿದ ಮುಖ್ಯಮಂತ್ರಿಗಳಿಗೆ ಶತ ಕೋಟಿ ನಮನಗಳು ಎಂದು ತಿಳಿಸಿದರು.

ಈ ನಿರ್ಧಾರವನ್ನು ಸ್ವಾಗತಿಸಿ ನಾಳೆ ವಾಲ್ಮೀಕಿ ಜಯಂತಿಯನ್ನು(Valmiki Jayanti) ವಿಜಯೋತ್ಸವದ ರೀತಿಯಲ್ಲಿ ಆಚರಿಸಬೇಕು. ತನ್ಮೂಲಕ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ರಾಜ್ಯ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಕೇಶವ್ ಪ್ರಸಾದ್, ವಿಧಾನಪರಿಷತ್ ಸದಸ್ಯರಾದ ಹೇಮಲತಾ ನಾಯಕ್, ಎಸ್.ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ನರಸಿಂಹ ನಾಯಕ್ ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *