ಅಕ್ರಮ ಆಸ್ತಿ ಗಳಿಕೆ ಕೇಸ್ – CBIನಿಂದ ಡಿಕೆಶಿಗೆ ಇನ್ನೂ ಒಂದು ವಾರ ರಿಲೀಫ್

Public TV
1 Min Read

ಬೆಂಗಳೂರು: ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಕೋರ್ಟ್ (Karnataka High Court) ತಡೆಯಾಜ್ಞೆ ನೀಡಿದ್ದು, ಇನ್ನೂ ಒಂದು ವಾರ ರಿಲೀಫ್ ಕೊಟ್ಟಿದೆ.

ಡಿಕೆಶಿ ವಿರುದ್ಧ ಸಿಬಿಐ (CBI) ನಡೆಸುತ್ತಿದ್ದ ತನಿಖೆಗೆ ಈ ಹಿಂದೆ ಕೋರ್ಟ್ ತಡೆ ನೀಡಿತ್ತು. ಅಲ್ಲದೇ ಫೆಬ್ರವರಿ 24ಕ್ಕೆ ಸಿಬಿಐಗೆ ತನಿಖಾ ಪ್ರಗತಿ ವರದಿ ನೀಡುವಂತೆ ಸೂಚಿಸಿತ್ತು. ಈ ಸಂಬಂಧ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಡಿಕೆಶಿಗೆ ಇನ್ನೂ ಒಂದು ವಾರ ಬಿಡುವು ನೀಡಿದೆ. ಇದನ್ನೂ ಓದಿ: ಡಿಕೆಶಿಗೆ ಮತ್ತೆ ಶಾಕ್ – ಸಿಬಿಐ ಬೆನ್ನಲ್ಲೇ ಫೀಲ್ಡಿಗೆ ಇಳಿದ ಇಡಿ

karnataka highcourt

ಸಿಬಿಐ ಪರ ವಕೀಲರು ತನಿಖಾ ಪ್ರಗತಿ ವರದಿ ಸಲ್ಲಿಸಿದ ಬಳಿಕ ಮಾರ್ಚ್ 3ಕ್ಕೆ ವಿಚಾರಣೆ ಮುಂದೂಡಿತು. ಈ ವೇಳೆ ಮಧ್ಯಂತರ ತಡೆ ಆದೇಶದಲ್ಲಿ ಮಾರ್ಪಾಡು ಮಾಡುವಂತೆ ಸಿಬಿಐ ಮನವಿ ಮಾಡಿತು. ಅದಕ್ಕೆ ಅನುಮತಿ ಕೊಡದ ಹೈಕೋರ್ಟ್ (Karnataka High Court) ಮುಂದಿನ ವಿಚಾರಣೆ (ಮಾ.3) ತನಕ ಯಥಾಸ್ಥಿತಿಯಲ್ಲಿ ಮುಂದುವರಿಯುವಂತೆ ಸೂಚಿಸಿತು. ಇದನ್ನೂ ಓದಿ: ಡಿಕೆಶಿ ಮನವಿ ಪುರಸ್ಕಾರ – ಸಿಬಿಐ ವಿಚಾರಣೆಯಿಂದ ವಿನಾಯಿತಿ

CBI 1

ಈ ಹಿಂದೆ ಡಿಕೆಶಿ `ತಾನೊಬ್ಬ ಕೃಷಿಕ, ಕೃಷಿಯಿಂದಲೇ ನನಗೆ ಆದಾಯ ಬರುತ್ತಿದೆ’ ಎಂಬ ಹೇಳಿಕೆ ನೀಡಿದ ಬಳಿಕ ಆಸ್ತಿಯನ್ನು ಸಿಬಿಐ ಮೌಲ್ಯಮಾಪನ ಮಾಡಿತ್ತು. ಡಿಕೆಶಿಯ ಆದಾಯದ ಮೂಲವನ್ನು ಬೆನ್ನತ್ತಿದ್ದ ಸಿಬಿಐ, ಯಾವ ಬೆಳೆ ಬೆಳೆಯುತ್ತಾರೆ? ತೋಟದಿಂದ ಎಷ್ಟು ವರ್ಷದಿಂದ ಫಲ ಬರುತ್ತಿದೆ? ಎಷ್ಟು ಲಾಭ ಬರುತ್ತಿದೆ? ಎಷ್ಟು ವರ್ಷದಿಂದ ವಾಣಿಜ್ಯ ಬೆಳೆ ಬೆಳೆಯುತ್ತಿದ್ದಾರೆ? ಜಮೀನು ಖರೀದಿಸಿದ್ದು ಯಾವಾಗ ಎಂಬ ಬಗ್ಗೆ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಅಷ್ಟೇ ಅಲ್ಲದೇ ಕೃಷಿ ಭೂಮಿಗೆ ಸಂಬಂಧಿಸಿದ ಕಳೆದ 10 ವರ್ಷದ ಪಹಣಿಯನ್ನು ಪಡೆಯಲಾಗಿತ್ತು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *