ಡಿನೋಟಿಫಿಕೇಷನ್ ಕೇಸ್: ಮಾಜಿ ಸಿಎಂ ಬಿಎಸ್‍ವೈಗೆ ಬಿಗ್ ರಿಲೀಫ್

Public TV
1 Min Read

ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯರೂಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಎಸಿಬಿ ದಾಖಲಿಸಿದ್ದ ಎಫ್‍ಐಆರ್‍ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಎಫ್‍ಐಆರ್ ದಾಖಲಿಸಲು ವಿಳಂಬ ಮಾಡಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತು ಮಾಡುವ ದಾಖಲೆಗಳಿಲ್ಲ ಎಂದು ಹೇಳಿ ನ್ಯಾ. ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದೆ.

ಡಿನೋಟಿಫೈ ಮಾಡಿ ಲಾಭ ಮಾಡಿಕೊಂಡಿರುವ ಬಗ್ಗೆ ಸೂಕ್ತ ಸಾಕ್ಷ್ಯಗಳಿಲ್ಲ. ಅಷ್ಟೇ ಅಲ್ಲದೇ ಒಂದೇ ದೂರಿನಲ್ಲಿ ಎರಡು ಎಫ್‍ಐಆರ್ ದಾಖಲಿಸುವುದು ಕಾನೂನು ಬಾಹಿರ ಎಂದು ನ್ಯಾ. ಅರವಿಂದ್ ಕುಮಾರ್ ಅಭಿಪ್ರಾಯಪಟ್ಟು ತಡೆಯಾಜ್ಞೆ ನೀಡಿದ್ದಾರೆ.

ಸಿಎಂ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಬಿಎಸ್‍ವೈ 257 ಎಕರೆ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಮತ್ತು ಭೂ ಮಾಲೀಕರಿಂದ ಅಪಾರ ಹಣ ಪಡೆದಿದ್ದಾರೆ ಎಂದು ಎಸಿಬಿ ವಾದಿಸಿತ್ತು. ಅಲ್ಲದೇ ತನಿಖೆ ವೇಳೆ ಯಡಿಯೂರಪ್ಪ ವಿರುದ್ಧ ಮತ್ತಷ್ಟು ಸಾಕ್ಷ್ಯ ಲಭ್ಯವಾಗಿದೆ ಎಂದು ಹೇಳಿತ್ತು. ಒಂದು ವೇಳೆ ತನಿಖೆ ಮುಂದುವರಿಸಬಹುದು ಎಂದು ಆದೇಶ ಬಂದಿದ್ದರೆ ಬಿಎಸ್‍ವೈಗೆ ಬಂಧನದ ಭೀತಿ ಎದುರಾಗುವ ಸಾಧ್ಯತೆಯಿತ್ತು.

 

 

Share This Article
Leave a Comment

Leave a Reply

Your email address will not be published. Required fields are marked *