ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಐಪಿಎಸ್ ಅಧಿಕಾರಿಗಳ ಸಂಘ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆ ಉಲ್ಲೇಖಿಸಿ ಐಪಿಎಸ್ ಅಧಿಕಾರಿಗಳ ಸಂಘ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳನ್ನ ಕೀಳು ಮಟ್ಟದಲ್ಲಿ ನೋಡುತ್ತಿದೆ. ಹಲವು ಪ್ರಕರಣಗಳ ತನಿಖೆ ವೇಳೆ ರಾಜಕಾರಣಿಗಳು ಹಸ್ತಕ್ಷೇಪ ಮಾಡುತ್ತಾರೆ. ಅಲ್ಲದೇ ತನಿಖೆಯ ದಿಕ್ಕು ತಪ್ಪಿಸಿ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿಸಲಾಗಿದೆ.

ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಪತ್ರದಲ್ಲಿ ಉಲ್ಲೇಖಸಿರುವ ಐಪಿಎಸ್ ಸಂಘದ ಅಧ್ಯಕ್ಷರಾಗಿರುವ ಎಡಿಜಿಪಿ ಆರ್ ಪಿ ಶರ್ಮಾ ಅವರು, ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ ಪ್ರಕರಣ, ಐಪಿಎಸ್ ಅಧಿಕಾರಿಗಳ ಪದೇ ಪದೇ ವರ್ಗಾವಣೆ, ಪೊಲೀಸರ ವರ್ಗಾವಣೆ, ಮೈಸೂರು ಐಎಎಸ್ ಆಧಿಕಾರಿ ರಶ್ಮಿ ಮೇಲೆ ಕಚೇರಿಯಲ್ಲೆ ಹಲ್ಲೆ ಪ್ರಕರಣ, ಮೈಸೂರು ಡಿಸಿ ಶಿಖಾ ಅವರ ಮೇಲಿನ ದಾಳಿ ಹಾಗೂ ಈ ಸಂಬಂಧ ಎಫ್‍ಐಆರ್ ದಾಖಲಿಸಿಕೊಳ್ಳಲು ತಡ ಮಾಡಿರುವ ಘಟನೆ, ಯುಬಿ ಸಿಟಿ ಬಳಿ ದಾಳಿ ಪ್ರಕರಣ, ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚಿಲು ಯತ್ನಿಸಿದ ರಾಜಕಾರಣಿ ಪ್ರಕರಣಗಳನ್ನು ತಮ್ಮ ಪತ್ರದ ಮೂಲಕ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದಾರೆ.

ಭಾರತೀಯ ಪೊಲೀಸ್ ಇಲಾಖೆಗೆ ತನ್ನದೇ ಸಂಸ್ಕೃತಿ ಇದೆ, ಆದರೆ ಅದಕ್ಕೆ ಈಗ ಕರಿನೆರಳು ಬಿದ್ದಿದೆ. ಪೊಲೀಸ್ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಯಾವುದೇ ತಪ್ಪು ಕಂಡು ಬಂದರೂ ಪೊಲೀಸರನ್ನೇ ಬಲಿಪಶುವಾಗಿ ಮಾಡಲಾಗುತ್ತಿದೆ. ಪೊಲೀಸರು ಮನಸ್ಫೂರ್ತಿಯಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಕಳೆದ ನಾಲ್ಕೂವರೆ ವರ್ಷದಲ್ಲಿ ಬೆಂಗಳೂರು ಆರು ಮಂದಿ ಆಯುಕ್ತರನ್ನು ಕಂಡಿದೆ. ಐಪಿಎಸ್ ಅಧಿಕಾರಿಗಳಿಗೆ ಸೇವೆ ಸಲ್ಲಿಸಲು ಸ್ವತಂತ್ರ್ಯ ನೀಡಬೇಕು. ಚುನಾವಣೆಗೆ ಮುನ್ನ ಪೊಲೀಸ್ ಆಧಿಕಾರಿಗಳು ಹಾಗೂ ಮಾಜಿ ಪೊಲೀಸರನ್ನು ಸೇರಿಸಿ ಸಭೆ ಮಾಡಬೇಕು ಎಂದು ಸಂಘದ ಅಧ್ಯಕ್ಷ ಆರ್.ಪಿ.ಶರ್ಮಾ ಪತ್ರದ ಮೂಲಕ ಮನವಿ ಮಾಡಿದ್ದಾರೆ.

 

 

Share This Article
Leave a Comment

Leave a Reply

Your email address will not be published. Required fields are marked *