ಅಪ್ಪುಗೆ ಕರ್ನಾಟಕ ರತ್ನ : ಅಧಿಕೃತ ಆಹ್ವಾನವಿಲ್ಲ, ಹೋಗಲ್ಲ ಎಂದ ಸಿದ್ಧರಾಮಯ್ಯ

Public TV
1 Min Read

ಬೆಂಗಳೂರಿನ ವಿಧಾನ ಸೌಧದ ಮುಂದೆ ಇಂದು ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ರಜನಿಕಾಂತ್ ಸೇರಿದಂತೆ ಹಲವರನ್ನು ಅತಿಥಿಯಾಗಿ ಆಹ್ವಾನ ನೀಡಲಾಗಿದೆ. ಪ್ರಶಸ್ತಿ ಪ್ರದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ವಹಿಸಿಕೊಳ್ಳಲಿದ್ದಾರೆ. ಹಾಗೆಯೇ ಮಾಜಿ ಮುಖ್ಯಮಂತ್ರಿಗಳಾ ಸಿದ್ಧರಾಮಯ್ಯ ಹೆಸರು ಕೂಡ ಆಮಂತ್ರಣ ಪತ್ರಿಕೆಯಲ್ಲಿದೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ (Siddaramaiah) ಅವರ ಹೆಸರು ಆಮಂತ್ರಣ ಪತ್ರಿಕೆಯಲ್ಲಿದ್ದರೂ, ಅವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಶಿಷ್ಟಾಚಾರದಂತೆ ಅವರು ನನಗೆ ಆಹ್ವಾನ ನೀಡಬೇಕಿತ್ತು. ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದರೆ ಹೇಗೆ ಹೋಗುವುದಕ್ಕೆ ಸಾಧ್ಯ? ಅವರು ನನಗೆ ಆಹ್ವಾನ ನೀಡಿಲ್ಲ. ಹಾಗಾಗಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿದ್ದಾರೆ ಸಿದ್ಧರಾಮಯ್ಯ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರೆ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ವಿಧಾನ ಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೌರವ ಉಪಸ್ಥಿತಿ ಇರಲಿದೆ. ಸಚಿವರಾದ ಆರ್. ಅಶೋಕ್ ಹಾಗೂ ವಿ ಸುನೀಲ್ ಕುಮಾರ್ ಅವರ ಘನ ಉಪಸ್ಥಿತಿ ಮತ್ತು ಹಲವರು ಅತಿಥಿಗಳಾಗಿ ಆಗಮಿಸಲಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *