ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

Public TV
2 Min Read

ಬೆಂಗಳೂರು: ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಲ್ಲಿ (Pradhan Mantri Bhartiya Jan Aushadhi Kendra) ಅತೀ ಹೆಚ್ಚು ಜನೌಷಧಿ ಕೇಂದ್ರ ತೆರೆದ ಪಟ್ಟಿಯಲ್ಲಿ ಕರ್ನಾಟಕ (Karnataka) ಎರಡನೇ ಸ್ಥಾನದಲ್ಲಿದ್ದು, ರಾಜ್ಯಾದ್ಯಂತ 540 ಹೊಸ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Dr K Sudhakar) ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಡವರು, ಹಿಂದುಳಿದ ಮತ್ತು ಮಧ್ಯಮವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಮತ್ತು ಶಸ್ತ್ರಚಿಕಿತ್ಸೆಯ ಪರಿಕರಗಳನ್ನು ಒದಗಿಸುವಲ್ಲಿ ಪ್ರಧಾನಮಂತ್ರಿ ಜನೌಷಧಿ ಕಾರ್ಯಕ್ರಮ ಯಶಸ್ವಿಯಾಗಿದೆ. ರಾಜ್ಯದಲ್ಲಿ ಉತ್ತಮವಾಗಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಈವರೆಗೆ 1,052 ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. ಇಡೀ ದೇಶದಲ್ಲಿ ಅತೀ ಹೆಚ್ಚು ಜನೌಷಧಿ ಕೇಂದ್ರ ತೆರೆದ ಪಟ್ಟಿಯಲ್ಲಿ ಉತ್ತರ ಪ್ರದೇಶದ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನ ಕರ್ನಾಟಕಕ್ಕೆ ಸಿಕ್ಕಿದೆ. ಕೇರಳ ಮೂರನೇ ಸ್ಥಾನದಲ್ಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕೋಲಾರ ಎಂಟ್ರಿ ಬೆನ್ನಲ್ಲೇ ಗುಂಪು ರಾಜಕೀಯ- ಸಿದ್ದರಾಮಯ್ಯ ಮೇಲೆ ಮುನಿಯಪ್ಪ ಮುನಿಸು

ಸಾರ್ವಜನಿಕರು ಆರೋಗ್ಯಕ್ಕಾಗಿ ಮಾಡುತ್ತಿರುವ ವೆಚ್ಚ ಜನೌಷಧಿ ಮಳಿಗೆಗಳಿಂದ ಗಣನೀಯವಾಗಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಹೊಸದಾಗಿ ಮತ್ತೆ 500 ಮಳಿಗೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 40 ಹೊಸ ಮಳಿಗೆಗಳಿಗೆ ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಈ ವರ್ಷ ಫೆಬ್ರವರಿ ಬಳಿಕ ಸುಮಾರು 300 ಜನೌಷಧಿ ಕೇಂದ್ರಗಳನ್ನು ಆರಂಭಿಸಿದ್ದೇವೆ. ರಾಜ್ಯದಲ್ಲಿ ಜನೌಷಧಿಗಳು ಬ್ರಾಂಡೆಡ್ ಆಗಿದ್ದು, ಮಾರುಕಟ್ಟೆಗಿಂತ ಶೇ.50 ರಿಂದ 80 ರಷ್ಟು ಅಗ್ಗದ ದರದಲ್ಲಿ ದೊರೆಯುತ್ತಿವೆ. ಒಟ್ಟು 1,451 ಔಷಧಗಳು ಮತ್ತು 240 ಶಸ್ತ್ರಚಿಕಿತ್ಸೆ ಪರಿಕರಗಳು, ದುಬಾರಿ ವೆಚ್ಚದ ಕ್ಯಾನ್ಸರ್ ಔಷಧಗಳು ಸಹ ಇಲ್ಲಿ ಸಿಗುತ್ತಿದೆ. ಹೀಗಾಗಿ, ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದಿಂದಲೂ ಜನೌಷಧಿ ಮಳಿಗೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆರೆಯಲು ಒತ್ತಡವಿದೆ. ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಎಂಬ ಗ್ರಾಮದಲ್ಲೂ ಜನೌಷಧಿ ಮಳಿಗೆ ತೆರೆದಿರುವುದು ವಿಶೇಷವಾಗಿದ್ದು, ಬೇಡಿಕೆಗೆ ಅನುಗುಣವಾಗಿ ಹೊಸ ಮಳಿಗೆಗಳಿಗೆ ಮಂಜೂರಾತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ ವಿವೇಕ ಶಾಲೆಗಳ ಬಣ್ಣ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *