ರಾಜ್ಯದಲ್ಲಿಂದು 2 ಸಾವಿರ ಮಂದಿಗೆ ಕೊರೊನಾ – ಎರಡೇ ದಿನಗಳಲ್ಲಿ 11 ಜೀವ ಬಲಿ

Public TV
2 Min Read

ಬೆಂಗಳೂರು: ಕಳೆದ ಎರಡು ವಾರಗಳ ಹಿಂದೆ ಸಮತೋಲನದಲ್ಲಿದ್ದ ಕೊರೊನಾ ಸೋಂಕಿನ ಪ್ರಕರಣ ದಿಢೀರ್‌ ಏರಿಕೆಯಾಗುತ್ತಿದೆ. ನಿನ್ನೆ 1,691 ಇದ್ದ ಸೋಂಕಿನ ಪ್ರಕರಣಗಳ ಸಂಖ್ಯೆ ಇಂದು 2,032ಕ್ಕೇ ಏರಿಕೆಯಾಗಿದೆ. ನಿನ್ನೆ 6 ಮಂದಿ ಮೃತಪಟ್ಟಿದ್ದು, ಇಂದು 5 ಜೀವಗಳು ಕೊರೊನಾ ಸೋಂಕಿಗೆ ಬಲಿಯಾಗಿವೆ.

ಇಂದು ರಾಜ್ಯದಲ್ಲಿ 1,686 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,77,541 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 30,638 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,81,49,328 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಶೀಘ್ರವೇ ಉದ್ಘಾಟನೆಗೊಳ್ಳಲಿದೆ ದೆಹಲಿ-ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ

ಕೋವಿಡ್‌ನಿಂದ ಇಂದು 5 ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,139 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ಶೇ.6.63 ಇದೆ. 10,395 ಸಕ್ರಿಯ ಪ್ರಕರಣಗಳಿವೆ. ಇಂದು 3.,638 ಮಂದಿಯನ್ನು (9,213 ರ‍್ಯಾಪಿಡ್ ಆಂಟಿಜನ್, 21,425 ಆರ್‌ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 86,105 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಕುಂದಾನಗರಿಯಲ್ಲಿ ಮೂರು ಚಿರತೆ ಪ್ರತ್ಯಕ್ಷ – ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಹರಸಾಹಸ, ಡ್ರೋನ್ ಕ್ಯಾಮೆರಾ ಬಳಕೆ

ಬೆಂಗಳೂರು ನಗರದಲ್ಲೇ 1,202 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 60, ಬಾಗಲಕೋಟೆ 18, ಬಳ್ಳಾರಿ 63, ಬೆಳಗಾವಿ 45, ಬೀದರ್ 0, ಚಾಮರಾಜನಗರ 17, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರಿ 1, ಚಿತ್ರದುರ್ಗ 6, ದಕ್ಷಿಣ ಕನ್ನಡ 14, ದಾವಣಗೆರೆ 39, ಧಾರವಾಡ 75, ಗದಗ 1, ಹಾಸನ 77, ಹಾವೇರಿ 12, ಕಲಬುರಗಿ 34, ಕೊಡಗು 25, ಕೋಲಾರ 36, ಕೊಪ್ಪಳ 15, ಮಂಡ್ಯ 31, ಮೈಸೂರು 132, ರಾಯಚೂರು 35, ರಾಮನಗರ 17, ಶಿವಮೊಗ್ಗ 29, ತುಮಕೂರು 13, ಉಡುಪಿ 7, ಉತ್ತರ ಕನ್ನಡ 12, ವಿಜಯಪುರ 1 ಹಾಗೂ ಯಾದಗಿರಿಯಲ್ಲಿ 3 ಪ್ರಕರಣ ವರದಿಯಾಗಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *