ಕೋವಿಡ್ ಏರಿಳಿತ; ರಾಜ್ಯದಲ್ಲಿಂದು 1,329 ಮಂದಿಗೆ ಕೊರೊನಾ – ಮೂರೇ ದಿನಗಳಲ್ಲಿ 16 ಜೀವ ಬಲಿ

Public TV
2 Min Read

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿತವಾಗುತ್ತಿದೆ. ಗುರುವಾರ 1,691 ಇದ್ದ ಸೋಂಕಿನ ಪ್ರಕರಣ ಶುಕ್ರವಾರ 2,032ಕ್ಕೆ ಏರಿಕೆಯಾಗಿತ್ತು. ಇಂದು 1,329 ಪ್ರಕರಣಗಳು ವರದಿಯಾಗಿದೆ. ಅಲ್ಲದೇ ಇಂದು ಸಹ 5 ಮಂದಿ ಮೃತಪಟ್ಟಿದ್ದು, ಕಳೆದ ಮೂರು ದಿನಗಳಲ್ಲಿ 16 ಜೀವಗಳು ಕೊರೊನಾ ಸೋಂಕಿಗೆ ಬಲಿಯಾಗಿವೆ.

ಇಂದು ರಾಜ್ಯದಲ್ಲಿ 1,614 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,79,155 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 31,154 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,81,80,482 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಕನ್ನಡದ ಹಿರಿಯ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ: ವಾಣಿಜ್ಯ ಮಂಡಳಿಯಿಂದ ಅಭಿನಂದನ ಕಾರ್ಯಕ್ರಮ

ಕೋವಿಡ್‌ನಿಂದ ಇಂದು 5 ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,144 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ಶೇ.4.26 ಇದೆ. 10,105 ಸಕ್ರಿಯ ಪ್ರಕರಣಗಳಿವೆ. ಇಂದು 31,154 ಮಂದಿಯನ್ನು (8,187 ರ‍್ಯಾಪಿಡ್ ಆಂಟಿಜನ್, 22,967 ಆರ್‌ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 47,299 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ – ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗುವಂತೆ ಕರೆ

ಬೆAಗಳೂರು ನಗರದಲ್ಲೇ 791 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 16, ಬಾಗಲಕೋಟೆ 3, ಬಳ್ಳಾರಿ 50, ಬೆಳಗಾವಿ 18, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 5, ಚಿತ್ರದುರ್ಗ 6, ದಕ್ಷಿಣ ಕನ್ನಡ 17, ದಾವಣಗೆರೆ 30, ಧಾರವಾಡ 38, ಗದಗ 2, ಹಾಸನ 55, ಹಾವೇರಿ 10, ಕಲಬುರಗಿ 16, ಕೊಡಗು 21, ಕೋಲಾರ 19, ಕೊಪ್ಪಳ 8, ಮಂಡ್ಯ 28, ಮೈಸೂರು 38, ರಾಯಚೂರು 46, ರಾಮನಗರ 19, ಶಿವಮೊಗ್ಗ 25, ತುಮಕೂರು 22, ಉಡುಪಿ 8, ಉತ್ತರ ಕನ್ನಡ 21, ವಿಜಯಪುರ 6 ಹಾಗೂ ಯಾದಗಿರಿಯಲ್ಲಿ 3 ಪ್ರಕರಣ ವರದಿಯಾಗಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *