ರಾಜ್ಯದ ಹವಾಮಾನ ವರದಿ: 11-07-2024

Public TV
1 Min Read

ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ. ಮುಂದಿನ ಮರ‍್ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಹುತೇಕ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಮಳೆಯೂ ಆಗಲಿದೆ. ಇದರೊಂದಿಗೆ ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. 30-40 ಕಿಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 28-24
ಶಿವಮೊಗ್ಗ: 27-22
ಬೆಳಗಾವಿ: 25-21
ಮೈಸೂರು: 29-22

ಮಂಡ್ಯ: 31-22
ಮಡಿಕೇರಿ: 22-17
ರಾಮನಗರ: 31-22
ಹಾಸನ: 26-19
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 30-21

ಕೋಲಾರ: 31-22
ತುಮಕೂರು: 29-21
ಉಡುಪಿ: 27-24
ಕಾರವಾರ: 27-24
ಚಿಕ್ಕಮಗಳೂರು: 24-19
ದಾವಣಗೆರೆ: 28-22

ಹುಬ್ಬಳ್ಳಿ: 27-22
ಚಿತ್ರದುರ್ಗ: 28-22
ಹಾವೇರಿ: 28-22
ಬಳ್ಳಾರಿ: 32-23
ಗದಗ: 29-22
ಕೊಪ್ಪಳ: 31-23

ರಾಯಚೂರು: 33-24
ಯಾದಗಿರಿ: 33-24
ವಿಜಯಪುರ: 30-23
ಬೀದರ್: 30-23
ಕಲಬುರಗಿ: 32-24
ಬಾಗಲಕೋಟೆ: 31-23

Share This Article